11:48 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ

06/11/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಾರ್ಖಾನೆಯಿಂದ ಕಬ್ಬು ಖಾಲಿ ಮಾಡಿ ಅನಂತಪುರ ಮಾರ್ಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂದಿನ ಟ್ರೇಲರ್ ಜೋಡನೆ ಪಿನ್ ಸ್ಲಿಪ್ಆಗಿ ಟ್ರೇಲರ್ ಪಲ್ಟಿ ಆಗಿದೆ. ಟ್ರೇಲರ್ ಪಕ್ಕದಲ್ಲೆ ತಾಂವಶಿ ಮಾರ್ಗವಾಗಿ ಹೊರಟಿದ್ದ ದ್ವಿಚಕ್ರ ವಾಹನ ಮೇಲೆ ಟ್ರೇಲರ್ ಪಲ್ಟಿಯಾಗಿದೆ.


ದ್ವಿಚಕ್ರ ವಾಹನದ ಮೇಲಿದ್ದ ಇಬ್ಬರ ಪೈಕಿ ಒಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಮಧಭಾವಿ ಗ್ರಾಮದ ಸಚಿನ ರಾಯಪ್ಪ ನಿವಲಗಿ (25) ಮೃತಪಟ್ಟ ದುರ್ದೈವಿ.

ಅಪಘಾತ ಸಂಭವಿಸಿದ ಸ್ಥಳದಿಂದ ಸ್ಥಳೀಯರು 108 ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಸರ್ಕಾರಿ 108 ತುರ್ತು ಸೇವೆ ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ತಲುಪಲು ಒಂದು ತಾಸಿಗೂ ಹೆಚ್ಚು ಸಮಯ ತಗೆದುಕೊಂಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಧ್ಯಮ ಜತೆ ಮಾತನಾಡಿದ ಸ್ಥಳೀಯರು ಸಂಪೂರ್ಣ ಹದಗೆಟ್ಟು ಹೋಗಿರುವ ರಸ್ತೆ ಹಾಗೂ ಅತಿ ವೇಗದಲ್ಲಿ ಚಲಿಸುತ್ತಿರುವ ಕಬ್ಬಿಣ ಟ್ರ್ಯಾಕ್ಟರಗಳು ತಗ್ಗು ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳು ಅಮಾಯಕರನ್ನು ಬಲಿ ಪಡೆಯುತ್ತಿವೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು