10:58 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿ: ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಸಾವು; ಇನ್ನೊಬ್ಬ ಗಂಭೀರ

06/11/2021, 20:19

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ  ಅನಂತಪುರ- ತಾಂವಶಿ ರಸ್ತೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಬ್ಬರು ಸಾವನ್ಬಪ್ಪಿದ್ದು, ಇನ್ನೊಬ್ಬರು ಗಾಯಗೊಂಡಿದ್ದಾರೆ.

ಖಾಲಿ ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದ ಪರಿಣಾಮ ರಸ್ತೆ ಮೇಲೆ ಹೊರಟಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ.

ಕಾರ್ಖಾನೆಯಿಂದ ಕಬ್ಬು ಖಾಲಿ ಮಾಡಿ ಅನಂತಪುರ ಮಾರ್ಗವಾಗಿ ಹೋಗುತ್ತಿದ್ದ ಟ್ರ್ಯಾಕ್ಟರ್ ಹಿಂದಿನ ಟ್ರೇಲರ್ ಜೋಡನೆ ಪಿನ್ ಸ್ಲಿಪ್ಆಗಿ ಟ್ರೇಲರ್ ಪಲ್ಟಿ ಆಗಿದೆ. ಟ್ರೇಲರ್ ಪಕ್ಕದಲ್ಲೆ ತಾಂವಶಿ ಮಾರ್ಗವಾಗಿ ಹೊರಟಿದ್ದ ದ್ವಿಚಕ್ರ ವಾಹನ ಮೇಲೆ ಟ್ರೇಲರ್ ಪಲ್ಟಿಯಾಗಿದೆ.


ದ್ವಿಚಕ್ರ ವಾಹನದ ಮೇಲಿದ್ದ ಇಬ್ಬರ ಪೈಕಿ ಒಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇನ್ನೊಬ್ಬರಿಗೆ ಗಂಭೀರ ಗಾಯಗೊಂಡಿದ್ದಾರೆ. ಅಥಣಿ ತಾಲೂಕಿನ ಮಧಭಾವಿ ಗ್ರಾಮದ ಸಚಿನ ರಾಯಪ್ಪ ನಿವಲಗಿ (25) ಮೃತಪಟ್ಟ ದುರ್ದೈವಿ.

ಅಪಘಾತ ಸಂಭವಿಸಿದ ಸ್ಥಳದಿಂದ ಸ್ಥಳೀಯರು 108 ಸಹಾಯವಾಣಿಗೆ ಕರೆ ಮಾಡಿದ್ದಾರೆ.

ಸರ್ಕಾರಿ 108 ತುರ್ತು ಸೇವೆ ಆಂಬುಲೆನ್ಸ್ ಅಪಘಾತ ಸ್ಥಳಕ್ಕೆ ತಲುಪಲು ಒಂದು ತಾಸಿಗೂ ಹೆಚ್ಚು ಸಮಯ ತಗೆದುಕೊಂಡಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಮಾಧ್ಯಮ ಜತೆ ಮಾತನಾಡಿದ ಸ್ಥಳೀಯರು ಸಂಪೂರ್ಣ ಹದಗೆಟ್ಟು ಹೋಗಿರುವ ರಸ್ತೆ ಹಾಗೂ ಅತಿ ವೇಗದಲ್ಲಿ ಚಲಿಸುತ್ತಿರುವ ಕಬ್ಬಿಣ ಟ್ರ್ಯಾಕ್ಟರಗಳು ತಗ್ಗು ಗುಂಡಿ ಬಿದ್ದು ಹದಗೆಟ್ಟಿರುವ ರಸ್ತೆಗಳು ಅಮಾಯಕರನ್ನು ಬಲಿ ಪಡೆಯುತ್ತಿವೆಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು