10:52 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ತ್ರಾಸಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ 10 ಲಕ್ಷ ರೂ. ವಂಚನೆ; ರಾಜಕಾರಣಿಗಳ ಹೆಸರಿನಲ್ಲಿ ಪಂಗನಾಮ

07/08/2022, 19:47

ಕುಂದಾಪುರ(reporterkarnataka.com): ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ಪಡೆದು ವಂಚನೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ತ್ರಾಸಿ ಗ್ರಾಮದಲ್ಲಿ ನಡೆದಿದೆ.

ತ್ರಾಸಿ ನಿವಾಸಿ ರೆಹಾನ್ ಅಹಮ್ಮದ್ ಎಂಬವರು ಹಣ ಕಳೆದುಕೊಂಡ ವ್ಯಕ್ತಿ. ಇವರಿಗೆ ಒಂದು ವರ್ಷದ ಹಿಂದೆ ಲತೇಶ್ ಸಂಜೀವ ಕುಂಬ್ಲೆ ಎಂಬವರ ಪರಿಚಯವಾಗಿತ್ತು. ಆತ ತನಗೆ ದೊಡ್ಡ ದೊಡ್ಡ ರಾಜಕಾರಣಿಗಳ ಪರಿಚಯವಿದೆಯೆಂದು ಕೆಲವು ರಾಜಕಾರಣಿಗಳ ಜತೆ ತೆಗೆಸಿಕೊಂಡಿರುವ ಫೋಟೋಗಳನ್ನು ತೋರಿಸಿದ್ದಾನೆ. ಅಲ್ಲದೆ, ರೆಹಾನ್ ಅವರ ಅಕ್ಕ ಸಬೀನಾ ಅಖ್ತರ್ ಅವರಿಗೆ ಸರಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ, 10 ಲಕ್ಷ ರೂ. ಕೇಳಿದ್ದನು‌. ಅದರಂತೆ ರೆಹಾನ್ ಅವರು ಬ್ಯಾಂಕ್ ಖಾತೆಯ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಆದರೆ, ಈವರೆಗೂ ಕೆಲಸವನ್ನು ಕೊಡಿಸಿಲ್ಲ‌. ಅದನ್ನು ಪ್ರಶ್ನಿಸಿದಾಗ ಆರೋಪಿ ಲತೇಶ್ 6 ಲಕ್ಷ ರೂ. ವಾಪಸು ನೀಡುವುದಾಗಿ ಹೇಳಿ, ಹೆಚ್.ಡಿ.ಎಫ್.ಸಿ ಬ್ಯಾಂಕಿನ ಚೆಕ್ ನ್ನು ನೀಡಿದ್ದನು. ಅದನ್ನು ಬ್ಯಾಂಕ್ ಗೆ ಹಾಕಿದಾಗ ಚೆಕ್ ಬೌನ್ಸ್ ಆಗಿದೆ. ಆರೋಪಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ಬಳಿಕ ಕೆಲಸ ಕೊಡಿಸದೆ ಮೋಸ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕುಂದಾಪುರ ನ್ಯಾಯಾಲಯದಲ್ಲಿ ದಾಖಲಾದ ಖಾಸಗಿ ದೂರಿನಂತೆ ಗಂಗೊಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು