7:34 AM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ, ಕಲಿಯುಗದಲ್ಲಿ ಸೌಜನ್ಯ; ಆಕೆ ಬರೇ ಹೆಣ್ಣಲ್ಲ, ಶಕ್ತಿ: ಮಹೇಶ್ ಶೆಟ್ಟಿ ತಿಮರೋಡಿ

20/08/2023, 21:44

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರೆಂದು ಇಡೀ ದಕ್ಷಿಣ ಕನ್ನಡಕ್ಕೆ ಗೊತ್ತು. ನಾವು 11 ವರ್ಷಗಳಿಂದ ನ್ಯಾಯದ ಭಿಕ್ಷೆ ಬೇಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.
ಸೌಜನ್ಯ ಹೋರಾಟ ಸಮಿತಿ ಮಂಗಳೂರು ವತಿಯಿಂದ ನಗರದ ಕದ್ರಿ ಬಯಲು ರಂಗ ಮಂದಿರದಲ್ಲಿ ಭಾನುವಾರ ನಡೆದ ಸೌಜನ್ಯ ಪರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.


ಎಲ್ಲ ರಾಜಕೀಯ ಪಕ್ಷದವರೂ ಒಂದೇ. ನಾವು 11 ವರ್ಷಗಳಿಂದ ನ್ಯಾಯ ಕೊಡಿ ಅಂತ ಭಿಕ್ಷೆ ಬೇಡುತ್ತಿದ್ದೇವೆ. ಕಾನೂನಾತ್ಮಕವಾಗಿ ನೀವು ನ್ಯಾಯ ಕೊಡದಿದ್ದರೆ ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ ಹೇಗೆ ಪಡೆಯಬೇಕು ಎನ್ನುವುದು ನಮಗೆ ಗೊತ್ತು ಎಂದು ಅವರು ನುಡಿದರು.
ಸೌಜನ್ಯ ಬರೇ ಹೆಣ್ಣಲ್ಲ. ಅದೊಂದು ಶಕ್ತಿ. ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ ಇದ್ದ ಹಾಗೆ ಕಲಿಯುಗದಲ್ಲಿ ಸೌಜನ್ಯ. ಇದು ಇಲ್ಲಿಗೆ ನಿಂತು ಹೋಗುವುದಿಲ್ಲ. ಸೌಜನ್ಯ ನೆಪ ಮಾತ್ರ. ಸೌಜನ್ಯ ಪ್ರಕರಣ ನಡೆದ ಬಳಿಕ ಒಂದೊಂದಾಗಿ ಪ್ರಕರಣಗಳು ಹೊರಬರುತ್ತಿದೆ ಎಂದು ಅವರು ನುಡಿದರು.
ಹೋರಾಟ ಸಮಿತಿಯ ಸಂಚಾಲಕಿ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಉಪಸ್ಥಿತರಿದ್ದರು. ಇದಕ್ಕೆ ಮುನ್ನ ಕದ್ರಿ ದೇವಾಲಯದಿಂದ ಬಯಲು ರಂಗ ಮಂದಿರದ ವರೆಗೆ ಪಾದಯಾತ್ರೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು