6:50 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ, ಕಲಿಯುಗದಲ್ಲಿ ಸೌಜನ್ಯ; ಆಕೆ ಬರೇ ಹೆಣ್ಣಲ್ಲ, ಶಕ್ತಿ: ಮಹೇಶ್ ಶೆಟ್ಟಿ ತಿಮರೋಡಿ

20/08/2023, 21:44

ಮಂಗಳೂರು(reporterkarnataka.com): ಧರ್ಮಸ್ಥಳದ ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದವರು ಯಾರೆಂದು ಇಡೀ ದಕ್ಷಿಣ ಕನ್ನಡಕ್ಕೆ ಗೊತ್ತು. ನಾವು 11 ವರ್ಷಗಳಿಂದ ನ್ಯಾಯದ ಭಿಕ್ಷೆ ಬೇಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ನಮ್ಮ ಹೋರಾಟದ ಸ್ವರೂಪ ಬದಲಾಗಲಿದೆ ಎಂದು ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹೇಳಿದರು.
ಸೌಜನ್ಯ ಹೋರಾಟ ಸಮಿತಿ ಮಂಗಳೂರು ವತಿಯಿಂದ ನಗರದ ಕದ್ರಿ ಬಯಲು ರಂಗ ಮಂದಿರದಲ್ಲಿ ಭಾನುವಾರ ನಡೆದ ಸೌಜನ್ಯ ಪರ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.


ಎಲ್ಲ ರಾಜಕೀಯ ಪಕ್ಷದವರೂ ಒಂದೇ. ನಾವು 11 ವರ್ಷಗಳಿಂದ ನ್ಯಾಯ ಕೊಡಿ ಅಂತ ಭಿಕ್ಷೆ ಬೇಡುತ್ತಿದ್ದೇವೆ. ಕಾನೂನಾತ್ಮಕವಾಗಿ ನೀವು ನ್ಯಾಯ ಕೊಡದಿದ್ದರೆ ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯ ಹೇಗೆ ಪಡೆಯಬೇಕು ಎನ್ನುವುದು ನಮಗೆ ಗೊತ್ತು ಎಂದು ಅವರು ನುಡಿದರು.
ಸೌಜನ್ಯ ಬರೇ ಹೆಣ್ಣಲ್ಲ. ಅದೊಂದು ಶಕ್ತಿ. ತ್ರೇತಾಯುಗದಲ್ಲಿ ಸೀತೆ, ದ್ವಾಪರದಲ್ಲಿ ದ್ರೌಪದಿ ಇದ್ದ ಹಾಗೆ ಕಲಿಯುಗದಲ್ಲಿ ಸೌಜನ್ಯ. ಇದು ಇಲ್ಲಿಗೆ ನಿಂತು ಹೋಗುವುದಿಲ್ಲ. ಸೌಜನ್ಯ ನೆಪ ಮಾತ್ರ. ಸೌಜನ್ಯ ಪ್ರಕರಣ ನಡೆದ ಬಳಿಕ ಒಂದೊಂದಾಗಿ ಪ್ರಕರಣಗಳು ಹೊರಬರುತ್ತಿದೆ ಎಂದು ಅವರು ನುಡಿದರು.
ಹೋರಾಟ ಸಮಿತಿಯ ಸಂಚಾಲಕಿ, ಸಾಮಾಜಿಕ ಹೋರಾಟಗಾರ್ತಿ ಪ್ರಸನ್ನ ರವಿ ಹಾಗೂ ಸೌಜನ್ಯ ತಾಯಿ ಕುಸುಮಾವತಿ ಉಪಸ್ಥಿತರಿದ್ದರು. ಇದಕ್ಕೆ ಮುನ್ನ ಕದ್ರಿ ದೇವಾಲಯದಿಂದ ಬಯಲು ರಂಗ ಮಂದಿರದ ವರೆಗೆ ಪಾದಯಾತ್ರೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು