6:02 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ತ್ರಿಪುರ: ಸಿಪಿಎಂ ಕಚೇರಿಗಳ ಮೇಲಿನ ದಾಳಿ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನಾ ಪ್ರದರ್ಶನ

12/09/2021, 22:32

ಮಂಗಳೂರು(reporterkarnataka.com): ತ್ರಿಪುರ ರಾಜ್ಯದೆಲ್ಲೆಡೆ ಸಿಪಿಎಂ ಕಚೇರಿಗಳ ಮೇಲೆ ನಡೆದ ಸರಣಿ ದಾಳಿಯನ್ನು ಖಂಡಿಸಿ ಸಿಪಿಎಂನಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಸೇರಿದ ಸಿಪಿಎಂ ಕಾರ್ಯಕರ್ತರು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ ಅವರು ತ್ರಿಪುರ ರಾಜ್ಯದಲ್ಲಿ 40 ವರ್ಷಗಳ ಕಾಲ ಸುದೀರ್ಘವಾಗಿ ಆಳ್ವಿಕೆ ನಡೆಸಿದ ಕಮ್ಯುನಿಸ್ಟರು ರಾಜ್ಯದ ಸರ್ವಾಂಗೀಣ ಅಭಿವ್ರದ್ದಿ ಗೆ ಶಕ್ತಿ ಮೀರಿ ಶ್ರಮಿಸಿದ್ದರು. ಮಾತ್ರವಲ್ಲದೆ ಪ್ರತ್ಯೇಕ ರಾಜ್ಯದ ಬೇಡಿಕೆಯಿಟ್ಟ ಅಲ್ಲಿನ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ದ ಪ್ರಬಲವಾಗಿ ಸೆಣಸಾಟ ನಡೆಸಿ ರಾಜ್ಯದಲ್ಲಿ ಐಕ್ಯತೆ ಸಾಧಿಸಿ, ತ್ರಿಪುರವನ್ನು ಭಾರತದ ಅವಿಭಾಜ್ಯ ಅಂಗವಾಗಿಸುವಲ್ಲಿ ಅಲ್ಲಿನ ಕಮ್ಯುನಿಸ್ಟ್ ಚಳುವಳಿಯ ಪಾತ್ರ ಪ್ರಧಾನವಾಗಿದೆ. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹಣಬಲ,ತೋಲ್ಬಲವನ್ನು ಬಳಸಿ, ಕುತಂತ್ರದಿಂದ ಆಧಿಕಾರಕ್ಕೇರಿದ ಬಿಜೆಪಿ, ತನ್ನ ಜನವಿರೋಧಿ ನೀತಿಗಳಿಂದಾಗಿ ಜನರ ಆಕ್ರೋಶಕ್ಕೆ ತುತ್ತಾಗಿದೆ. ಇದರ ವಿರುದ್ದ ಪ್ರಬಲ ಜನಚಳುವಳಿಯನ್ನು ಸಂಘಟಿಸಿದ ಕಮ್ಯುನಿಸ್ಟರ ವಿರುದ್ದ ಸರಣಿ ದಾಳಿ ಸಂಘಟಿಸುವ ಮೂಲಕ ತನ್ನ ಹತಾಶ ಪ್ರವ್ರತ್ತಿಯನ್ನು ಪ್ರದರ್ಶಿಸಿದೆ ಎಂದು ಟೀಕಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಿಪಿಎಂ ಮಂಗಳೂರು ನಗರ ದಕ್ಷಿಣ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್,  ದೇಶಪ್ರೇಮದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ಬಿಜೆಪಿ ತ್ರಿಪುರದಲ್ಲಿ ದೇಶದ್ರೋಹಿಗಳೊಂದಿಗೆ ಒಪ್ಪಂದ ಮಾಡಿ ಕಳೆದ ಚುನಾವಣೆಯಲ್ಲಿ ಗೆದ್ದು ರಾಜ್ಯದೆಲ್ಲೆಡೆ ದೊಂಬಿ ಗಲಭೆ ಸೃಷ್ಟಿಸಿ ಜನರ ಬದುಕನ್ನೇ ನರಕಯಾತನೆಯನ್ನಾಗಿಸಿದೆ ಎಂದರು.

ಸಿಪಿಎಂ ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಯಾದವ ಶೆಟ್ಟಿ ಮಾತನಾಡಿ, ಕಮ್ಯುನಿಷ್ಟರು ತನ್ನ ಕೊನೆಯ ಉಸಿರು ಇರುವವರೆಗೂ ದೇಶದ ಐಕ್ಯತೆ, ಸೌಹಾರ್ದತೆಗಾಗಿ ಹಾಗೂ ಜನರ ಬದುಕಿನ ರಕ್ಷಣೆಗಾಗಿ ಶ್ರಮಿಸುತ್ತಾರೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಪಕ್ಷದ  ದ.ಕ.ಜಿಲ್ಲಾ ನಾಯಕರಾದ ಕೃಷ್ಣಪ್ಪ ಸಾಲ್ಯಾನ್, ದಯಾನಂದ ಶೆಟ್ಟಿ,ಜಯಂತಿ ಶೆಟ್ಟಿ, ಯೋಗೀಶ್ ಜಪ್ಪಿನಮೊಗರು, ಮಂಗಳೂರು ನಗರ ಮುಖಂಡರಾದ ನವೀನ್ ಕೊಂಚಾಡಿ, ಬಶೀರ್ ಪಂಜಿಮೊಗರು, ಬಾಬು ದೇವಾಡಿಗ,ಅಶೋಕ್ ಶ್ರೀಯಾನ್, ದಿನೇಶ್ ಶೆಟ್ಟಿ, ಶಶಿಧರ್ ಶಕ್ತಿಗರ, ಶ್ರೀನಾಥ ಕಾಟಿಪಳ್ಳ ಮಹಿಳಾ ಮುಖಂಡರಾದ ಭಾರತಿ ಬೋಳಾರ, ನಳಿನಾಕ್ಷಿ, ವಿಲಾಸಿನಿ, ಪ್ರಮೀಳಾ ಶಕ್ತಿನಗರ, ದಲಿತ ಹಕ್ಕುಗಳ ಸಮಿತಿಯ ನಾಯಕರಾದ ತಿಮ್ಮಯ್ಯ ಕೊಂಚಾಡಿ, ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು