ಇತ್ತೀಚಿನ ಸುದ್ದಿ
ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ ಪಾರು
15/03/2026, 22:04
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಲಿಸುತ್ತಿದ್ದ ಕಾರಿನ ಮೇಲೆ ಕಟ್ಟಿಗೆ ತುಂಬಿದ್ದ ಲಾರಿಯೊಂದು ಉರುಳಿ ಬಿದ್ದರೂ ಮಗು ಸಹಿತ ದಂಪತಿ ಪಾರಾದ ಪವಾಡಸದೃಶ್ಯ ಘಟನೆಗೆ ಮಲೆನಾಡು ಚಿಕ್ಕಮಗಳೂರು ಸಾಕ್ಷಿಯಾಗಿದೆ.



ಚಿಕ್ಕಮಗಳೂರು ಹೊರವಲಯದ ಲಕ್ಯಾ ಕ್ರಾಸ್ ಬಳಿ ಈ ಭೀಕರ ಅಪಘಾತ ನಡೆದಿದೆ. ಕಟ್ಟಿಗೆ ತುಂಬಿದ್ದ ಲಾರಿ ಕೆಳಗೆ ಕಾರು ಸಿಲುಕಿಕೊಂಡಿತ್ತು. ಸ್ಥಳೀಯರ ಸಹಾಯದಿಂದ ದಂಪತಿ ಮತ್ತು ಮಗು ಪವಾಡ ಸದೃಶ ಬಚಾವ್ ಆಗಿದೆ. ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ರಾಷ್ಡ್ರೀಯ ಹೆದ್ದಾರಿಯಲ್ಲಿ ಸಾಲು ಸಾಲಾಗಿ ವಾಹನಗಳು ನಿಂತಿದ್ದವು. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












