10:36 PM Friday14 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ಟ್ರಕ್ -ಟೆಂಪೋ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್ ನ 7 ಮಂದಿ ದಾರುಣ ಸಾವು

29/05/2022, 22:21

ಬೀದರ್(reporterkarnataka.com): 
ಉತ್ತರ ಪ್ರದೇಶದ ಬಹ್ರೆöಪುಚ್-ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರನ್ನು ಬೀದರ್ ಜಿಲ್ಲೆಗೆ ಸೇರಿದವರು ಎಂದು ಗುರುತಿಸಲಾಗಿದೆ.

ಟ್ರಕ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದು ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಯಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ಶಿವಕುಮಾರ ಪೂಜಾರಿ (29), ಜಗದಾಂಬ (52), ಮನ್ಮತ್ (36), ಅನಿಲ್ (30), ಸಂತೋಷ್ (35), ಶಶಿಕಲಾ (38) ಮತ್ತು ಸರಸ್ವತಿ (47) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನೂ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಟೆಂಪೋ ಟ್ರಾವೆಲರ್ ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿತ್ತು ಎನ್ನಲಾಗಿದೆ. ಬೀದರ್‌ನ ಗಾಂಧಿಗಂಜ್ ಪ್ರದೇಶದ 16ಮಂದಿ ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದರು. ಈ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿ ಏಳು ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು