2:07 AM Thursday9 - July 2026
ಬ್ರೇಕಿಂಗ್ ನ್ಯೂಸ್
ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:…

ಇತ್ತೀಚಿನ ಸುದ್ದಿ

ಟ್ರಕ್ -ಟೆಂಪೋ ಮುಖಾಮುಖಿ ಡಿಕ್ಕಿ: ಅಯೋಧ್ಯೆಗೆ ತೆರಳುತ್ತಿದ್ದ ಬೀದರ್ ನ 7 ಮಂದಿ ದಾರುಣ ಸಾವು

29/05/2022, 22:21

ಬೀದರ್(reporterkarnataka.com): 
ಉತ್ತರ ಪ್ರದೇಶದ ಬಹ್ರೆöಪುಚ್-ಲಖಿಂಪುರ ಖೇರಿ ಹೆದ್ದಾರಿಯಲ್ಲಿ ನಡೆದ ಟ್ರಕ್ ಮತ್ತು ಟೆಂಪೋ ಟ್ರಾವೆಲರ್ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದು, ಇತರ 12 ಮಂದಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿದವರನ್ನು ಬೀದರ್ ಜಿಲ್ಲೆಗೆ ಸೇರಿದವರು ಎಂದು ಗುರುತಿಸಲಾಗಿದೆ.

ಟ್ರಕ್ ಮತ್ತು ಟೆಂಪೋ ಮುಖಾಮುಖಿ ಡಿಕ್ಕಿ ಹೊಡೆದು ಈ ಘೋರ ದುರಂತ ನಡೆದಿದೆ. ಅಪಘಾತದ ತೀವ್ರತೆಯಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರು ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ.
ಮೃತರನ್ನು ಶಿವಕುಮಾರ ಪೂಜಾರಿ (29), ಜಗದಾಂಬ (52), ಮನ್ಮತ್ (36), ಅನಿಲ್ (30), ಸಂತೋಷ್ (35), ಶಶಿಕಲಾ (38) ಮತ್ತು ಸರಸ್ವತಿ (47) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ವಾಹನದೊಳಗೆ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಇನ್ನೂ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಟೆಂಪೋ ಟ್ರಾವೆಲರ್ ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿತ್ತು ಎನ್ನಲಾಗಿದೆ. ಬೀದರ್‌ನ ಗಾಂಧಿಗಂಜ್ ಪ್ರದೇಶದ 16ಮಂದಿ ಅಯೋಧ್ಯೆಗೆ ಶ್ರೀರಾಮ ಜನ್ಮಭೂಮಿ ಪೂಜೆಗೆಂದು ತೆರಳುತ್ತಿದ್ದರು. ಈ ಅಪಘಾತದಲ್ಲಿ ಟೆಂಪೋ ಚಾಲಕ ಸೇರಿ ಏಳು ಮಂದಿ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು