3:15 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ತುಳುನಾಡಿನಲ್ಲಿ ನಿರುದ್ಯೋಗಿಗಳ ದಂಡು ಸೃಷ್ಟಿಸಿದ್ದೇ ಸಂಸದ ನಳಿನ್ ಅವರ ಸಾಧನೆ : ಮುನೀರ್ ಕಾಟಿಪಳ್ಳ

28/10/2021, 10:26

ಮಂಗಳೂರು(reporterkarnataka.com): ಮಂಗಳೂರು ಸೆಝ್ ಗೆ ಭೂಮಿ ಕಳೆದು ಕೊಂಡಿರುವ ಸಂತ್ರಸ್ತ ಕುಟುಂಬದ ಅಭ್ಯರ್ಥಿಗಳನ್ನು ಒಪ್ಪಂದದಂತೆ ತಕ್ಷಣ ನೇಮಕಾತಿಗೊಳಿಸಬೇಕು, ಜೆಬಿಎಫ್ ಕಂಪೆನಿ ಉತ್ಪಾದನೆ ಆರಂಭಿಸಬೇಕು, ಸೆಝ್ ನಲ್ಲಿರುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ  ಕಡ್ಡಾಯವಾಗಿ ಉದ್ಯೋಗ ಮೀಸಲಿಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಡಿವೈಎಫ್ಐ ಮಂಗಳೂರು ನಗರ ಸಮಿತಿ ಜೋಕಟ್ಟೆಯಲ್ಲಿರುವ ಸೆಝ್ ಪ್ರಧಾನ ದ್ವಾರದ ಮುಂಭಾಗ ಪ್ರತಿಭಟನಾ ಧರಣಿ ನಡೆಸಿತು.

ಧರಣಿಯನ್ನು ಉದ್ಘಾಟಿಸಿ ಮಾತಾಡಿದ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಸೆಝ್ ಮುಂತಾದ ಕಂಪೆನಿಗಳಿಗೆ ಫಲವತ್ತಾದ ಜಮೀನು ವಶಪಡಿಸಿಕೊಳ್ಳುವಾಗ ಉದ್ಯೋಗ ಸೃಷ್ಟಿ, ಅಭಿವೃದ್ದಿಯ ಮಂತ್ರ ಜಪಿಸುತ್ತಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ಶಾಸಕರು, ಮುಖಂಡರು ಕಂಪೆನಿಗಳು ಸ್ಥಳೀಯರಿಗೆ ಉದ್ಯೋಗ ನೀಡದೆ ಹೊರಗಟ್ಟಿದಾಗ ಮೌನಕ್ಕೆ ಶರಣಾಗುತ್ತಾರೆ ಹಾಗೂ ಧರ್ಮ, ದೇವರ ವಿಷಯ ಮುಂದಿಟ್ಟು ಜನರ ದಿಕ್ಕುತಪ್ಪಿಸುತ್ತಾರೆ. ತುಳುನಾಡಿನಲ್ಲಿ ನಿರುದ್ಯೋಗ ಭೀಕರ ಸ್ವರೂಪ ತಾಳಲು ಬಿಜೆಪಿ ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯೇ ನೇರ ಕಾರಣ. ದಂಡು ದಂಡು ನಿರುದ್ಯೋಗಿಗಳನ್ನು ಸೃಷ್ಟಿಸಿದ್ದೇ ಸಂಸದ ನಳಿನ್ ಕುಮಾರ್ ಕಟೀಲ್ ರ ಸಾಧನೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. 

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ. ಕೆ. ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ನಾಗರಿಕ ಹೋರಾಟ ಸಮಿತಿಯ ಅಬೂಬಕ್ಕರ್ ಭಾವ ಧರಣಿಯನ್ನು ಉದ್ದೇಶಿಸಿ ಮಾತನಾಡಿದರು‌. ಡಿವೈಎಫ್ಐ ಮುಖಂಡರಾದ ಆಶಾ ಬೋಳೂರು, ಸಿಲ್ವಿಯಾ ಜೋಕಟ್ಟೆ, ಮಕ್ಸೂದ್ ಕಾನ, ಮುಸ್ತಫಾ ಬೈಕಂಪಾಡಿ, ನಿತಿನ್ ಬಂಗೇರ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಬಿ ಎಸ್ ಬಶೀರ್, ಜೋಕಟ್ಟೆ ಗ್ರಾಮ ಪಂಚಾಯತ್ ಸದಸ್ಯರಾದ ನವಾಜ್, ಬಾಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಆದಂ ಕಳವಾರು, ತೋಕೂರು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸಂಸು ಇದ್ದಿನಬ್ಬ, ಶೇಖರ್ ನಿರ್ಮುಂಜೆ, ವಿಶ್ವನಾಥ ಜೋಕಟ್ಟೆ, ಆಮಿನಮ್ಮ, ಇಕ್ಬಾಲ್ ಮತ್ತಿತರರು ಉಪಸ್ಥಿತರಿದ್ದರು. ಡಿವೈಎಫ್ಐ ಜಿಲ್ಲಾ ಸಮಿತಿ ಸದಸ್ಯ ಶ್ರೀನಾಥ್ ಕುಲಾಲ್ ಸ್ವಾಗತಿಸಿ ಕೊನೆಯಲ್ಲಿ ಧನ್ಯವಾದ ಸಲ್ಲಿಸಿದರು‌.


ಧರಣಿಗೆ ಮಂಚಿತವಾಗಿ ಜೋಕಟ್ಟೆ ಗ್ರಾಮ ಪಂಚಾಯತ್ ಮುಂಭಾಗದಿಂದ ಸೆಝ್ ದ್ವಾರದ ವರಗೆ ಮೆರವಣಿಗೆ ನಡೆಯಿತು. ಸೆಝ್ ನ ಹಿರಿಯ ಅಧಿಕಾರಿಗಳಾದ ಹಿಟಾ ಶ್ರೀನಿವಾಸ ರಾಜು, ಯೋಗೀಶ್, ಹನೀಫ್ ಪ್ರತಿಭಟನಾಕಾರ ಬಳಿ ಬಂದು ಮನವಿ ಸ್ವೀಕರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು