5:51 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ರಂಗೋತ್ಸವ ಸಾಂಸ್ಕೃತಿಕ ಸ್ಪರ್ಧೆಯ ಪಟ್ಟಿಯಿಂದ ಭೂತಾರಾಧನೆ ಕೈ ಬಿಡಲು ತುಳು ಸಾಹಿತ್ಯ ಅಕಾಡೆಮಿ ಆಗ್ರಹ

23/02/2025, 23:18

ಮಂಗಳೂರು(reporterkarnataka.com): ಶಾಲೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ರಂಗೋತ್ಸವ ಕಾರ್ಯಕ್ರಮದ ಪಟ್ಟಿಯಿಂದ ಭೂತಾರಾಧನೆಯ ಉಲ್ಲೇಖವನ್ನು ಕೈ ಬಿಡುವಂತೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಯೋಜನಾ ನಿರ್ದೇಶಕರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ದೇಶದ ವಿಭಿನ್ನ ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸುವ ಸಲುವಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮವು ಒಂದು ಉತ್ತಮ ಪರಿಕಲ್ಪನೆಯಾಗಿದೆ. ರಂಗೋತ್ಸವದ ಸಲುವಾಗಿ ಯಾವೆಲ್ಲ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಿದೆ ಎಂಬ ಬಗ್ಗೆ ಉದಾಹರಣೆಗಾಗಿ ನೀಡಲಾಗಿರುವ ಪಟ್ಟಿಯಲ್ಲಿ ಭೂತಾರಾಧನೆಯನ್ನು ಉಲ್ಲೇಖ ಮಾಡಿರುವುದು ಇಲಾಖೆಯ ಸರಿಯಾದ ನಡೆಯಾಗಿರುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಸುತ್ತೋಲೆಯಿಂದ ಭೂತಾರಾಧನೆಯ ಹೆಸರನ್ನು ಕೈ ಬಿಟ್ಟು ಪ್ರತ್ಯೇಕ ಸುತ್ತೋಲೆಯನ್ನು ಪ್ರಕಟಿಸಬೇಕೆಂದು ಆಗ್ರಹಿಸಿದ್ದಾರೆ. ಭೂತಾರಾಧನೆಯು ಕರಾವಳಿಯ ಅತ್ಯುನ್ನತ ಸಾಂಸ್ಕೃತಿಕ ಹಾಗೂ ಆರಾಧನಾ ಪರಂಪರೆಯಾಗಿರುತ್ತದೆ. ಆದರೆ ಭೂತಾರಾಧನೆಯನ್ನು ಸಾಂಸ್ಕೃತಿಕ ಸ್ಪರ್ಧೆಯ ಭಾಗವಾಗಿ ಪರಿಗಣಿಸುವುದು ಸೂಕ್ತವಲ್ಲ. ಆರಾಧನ ಪ್ರಕಾರ ಒಂದನ್ನು ಶಾಲೆಗಳ ಸ್ಪರ್ಧಾ ವೇದಿಕೆಗೆ ತಂದಾಗ ಜನರ ನಂಬಿಕೆಗೆ ಘಾಸಿಯಾಗುವುದು ಸಹಜ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಇಲಾಖೆಯು ತಕ್ಷಣ ಈಗಾಗಲೇ ಹೊರಡಿಸಿರುವ ಸುತ್ತೋಲೆಯನ್ನು ಪುನರ್ ಪರಿಶೀಲನೆ ಮಾಡಿ ಉದಾಹರಣೆಗಾಗಿ ನೀಡಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖಿಸಲಾಗಿರುವ ಭೂತಾರಾಧನೆಯ ಹೆಸರನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು