9:58 AM Sunday8 - September 2024
ಬ್ರೇಕಿಂಗ್ ನ್ಯೂಸ್
ಕಲಿಯುವ ಛಲದಿಂದ ಸಂಕಲ್ಪ ಸಾಧಿಸಿದ ತನ್ವಿ!: ಕೆಳ ಮಧ್ಯಮ ಕುಟುಂಬದ ವಿದ್ಯಾರ್ಥಿನಿ ಎಂಬಿಬಿಎಸ್… ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ಬುತ್ತಿ ಕಾರ್ಯಕ್ರಮಕ್ಕೆ ಚಾಲನೆ ಗಣೇಶೋತ್ಸವಕ್ಕೆ ಕಾಂಗ್ರೆಸ್‌ ಸರಕಾರ ಯಾವುದೇ ಅಡ್ಡಿ ಮಾಡಿಲ್ಲ; ಶಾಸಕ ಕಾಮತ್ ಸಂಕುಚಿತ ಭಾವನೆಯಿಂದ… ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು ತೀರ್ಥಹಳ್ಳಿ: ಎದೆ ನೋವು ಚಿಕಿತ್ಸೆಗೆಂದು ಆಸ್ಪತ್ರೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವಕ ರಸ್ತೆಗೆ ಬಿದ್ದು… ಭಾರಿ ಮಳೆ: ಆಗುಂಬೆ ಬಳಿಯ ಕಾರ್ ಬೈಲು ಗುಡ್ಡ ಕುಸಿತ ದಿಢೀರ್ ವಾಹನ ಸಂಚಾರ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ: ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಬಳ್ಳಾರಿಯಲ್ಲಿ ಸೆ.6ರಂದು ಗೋ ಬ್ಯಾಕ್ ಗವರ್ನರ್ ಚಳವಳಿ: ಕಪ್ಪುಪಟ್ಟಿ, ಬಾವುಟ ಪ್ರದರ್ಶನ ರಾಜಕೀಯ ರಣತಂತ್ರಕ್ಕೆ ಮುದುಡಿದ ಕಮಲ: ನಂಜನಗೂಡು ನಗರಸಭೆ ನೂತನ ಸಾರಥಿಗಳಾಗಿ ಕಾಂಗ್ರೆಸ್ ನ… ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆ ಮಾಡಿ; ಸಾರ್ವಜನಿಕರಿಗೆ ಮಾರಕವಾಗುವ ಡಿಜೆ ಬೇಡ: ಡಿವೈಎಸ್’ಪಿ…

ಇತ್ತೀಚಿನ ಸುದ್ದಿ

ತುಳುವಿಗಾಗಿ ಮತ್ತೊಮ್ಮೆ ಕೈ ಎತ್ತುವ ಸರದಿ: ಸೆ. 5ರಂದು ‘ಟ್ವೀಟ್ ತುಳುನಾಡು’; ಕವಿ ಮಂದಾರ ಕೇಶವ ಭಟ್ ಮತ್ತೆ ನೆನಪಿಗೆ

04/09/2021, 19:18

ಮಂಗಳೂರು(reporterkarnataka.com): 

ಸಂವಿಧಾನದ 8ನೇ ಪರಿಚ್ಛೇದದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ತುಳುವರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಹೋರಾಟ ಮಾಡಿಕೊಂಡು ಬಂದರೂ ಇನ್ನೂ ಅದು ಕಾರ್ಯಗತಗೊಂಡಿಲ್ಲ. ಹಲವು ಸರಕಾರಗಳು ಬದಲಾದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮನೋಭಾವ ಬದಲಾಗಿಲ್ಲ. ಈ ನಿಟ್ಟಿನಲ್ಲಿ ನಮ್ಮನ್ನಾಳುವವರನ್ನು ಬಡಿದೆಬ್ಬಿಸಲು ಮತ್ತೆ ತುಳುವಿಗಾಗಿ ಟ್ವೀಟ್ ಅಭಿಯಾನ ನಡೆಯಲಿದೆ. ಸೆಪ್ಟೆಂಬರ್ 5 ರಂದು ಟ್ವೀಟ್ ಅಭಿಯಾನ ಸಾಕಾರಗೊಳ್ಳಲಿದೆ.

ತುಳುವರ ಸ್ವಾಭಿಮಾನದ ದೃಷ್ಟಿಯಿಂದ ಸೆ.5ರಂದು 

ನಡೆಯುವ#TuluOfficialinKA_KL ಟ್ವೀಟ್ ಅಭಿಯಾನವು ಬಹಳಷ್ಟು ಮಹತ್ವ ಪಡೆದಿದೆ. ಈ ಹಿಂದೆ ಜೂನ್ 14ರಂದು ನಡೆದ

ಟ್ವೀಟ್ ಅಭಿಯಾನದಲ್ಲಿ 4 ಲಕ್ಷ ಮಂದಿ ಪಾಲ್ಗೊಂಡು ರಾಷ್ಟ ಮಟ್ಟದಲ್ಲಿ ಹೊಸ ದಾಖಲೆಯ ಬರೆದಿದ್ದರು. ಇಷ್ಟೇ ಅಲ್ಲದೆ ಇದು ದೇಶವ್ಯಾಪ್ತಿಯಲ್ಲಿ ಚರ್ಚೆಗೆ ಗ್ರಾಸವಾಯಿತು. ರಾಜಕೀಯ ವಲಯದಲ್ಲಿಯೂ ಬಿರುಗಾಳಿ ಎನ್ನಿಸಿತು.

ತುಳುವಿಗೆ 60 ವರ್ಷಗಳ ಕಾಲ ಯಾವುದೇ ಸ್ಥಾನಮಾನ ಕೊಡದೇ ಇರುವ ವಿರುದ್ಧ ಜನಾಕ್ರೋಶ ಟ್ವೀಟ್ ಮೂಲಕ ಹೊರಹೊಮ್ಮಿತ್ತು. ವಿಶೇಷವೆಂದರೆ ಬಹಳಷ್ಟು ರಾಜಕೀಯ ಪಕ್ಷಗಳ ನಾಯಕರು ಅಭಿಯಾನದಲ್ಲಿ ಕೈಜೋಡಿಸಿ ತುಳುವಿಗಾಗಿ ಕೈ ಎತ್ತಿದ್ದರು. ಆದರೆ ಅಷ್ಟಕ್ಕೆ ತುಳುವರ ಬೇಡಿಕೆ ಈಡೇರುವುದಿಲ್ಲ.

ಕಾಸರಗೋಡಿನ ನೀಲೇಶ್ವರದಿಂದ ಆರಂಭವಾಗಿ ಬಾರಕೂರು ವರೆಗೆ ಹಬ್ಬಿರುವ ಈ ವಿಶಾಲವಾದ ತುಳುನಾಡಿನಲ್ಲಿ ತುಳುವರಿಗೆ ಇದೊಂದು ಬರೇ ಭಾಷೆಯಲ್ಲ. ಬದಲಿಗೆ ಇದೊಂದು ಜೀವನ ವಿಧಾನ, ಸಂಸ್ಕೃತಿ ಆಗಿದೆ. ತುಳುವಿನಲ್ಲಿ ಸಾಕಷ್ಟು ಸಾಹಿತ್ಯ ರಚನೆಯಾಗಿದೆ. ಕವಿತೆ, ಕಥೆ, ಮಹಾಕಾವ್ಯ, ಕಾದಂಬರಿ, ನಾಟಕ, ರೂಪಕ, ಯಕ್ಷಗಾನ ರಚನೆಯಾಗಿದೆ. ತುಳು ಸಿನಿಮಾಗಳು ಬಂದಿವೆ. ತುಳುವಿನ ವಾಲ್ಮೀಕಿ ಎಂದೇ ಪ್ರಸಿದ್ಧರಾದ ಮಂದಾರ ಕೇಶವ ಭಟ್ ಅವರು ತುಳುವಿನಲ್ಲಿ ಮಹಾಕಾವ್ಯವನ್ನೇ ಸೃಷ್ಟಿಸಿದ್ದಾರೆ. ಮಂದಾರ ರಾಮಾಯಣ ಬರೆದಿದ್ದಾರೆ. ಇದರ ಜತೆಗೆ ತುಳು ಭಾಷೆಗಾಗಿ ಕೇಶವ ಭಟ್ ಅವರು ಸಾಕಷ್ಟು ಸಾಹಿತ್ಯ ಕೃಷಿ ಮಾಡಿದ್ದಾರೆ. ತುಳು ಭಾಷೆಯ ನಡೆದಾಡುವ ವಿಶ್ವವಿದ್ಯಾನಿಲಯವೇ ಅವರಾಗಿದ್ದರು. ಆದರೆ ಅವರು ಹುಟ್ಟಿದ ಮನೆ ಮಂಗಳೂರಿನ ಪಚ್ಚನಾಡಿ ಸಮೀಪದ ಮಂದಾರದಲ್ಲಿ ತ್ಯಾಜ್ಯ ಸುನಾಮಿಗೆ ಸಿಲುಕಿ ಶಿಥಿಲಗೊಂಡಿದೆ. ಅದನ್ನು ಉಳಿಸುವ ಪ್ರಯತ್ನ ನಡೆಯಬೇಕಾಗಿದೆ.ಅವರು ಬದುಕಿರುತ್ತಿದ್ದರೆ ಈ ಕಾಲಘಟ್ಟದಲ್ಲಿ ತುಳುಭಾಷೆಯ ಉಳಿವಿನ ಹೋರಾಟದಲ್ಲಿ ಮುಂಚೋಣಿಯಲ್ಲಿರುತ್ತಿದ್ದರು ಎಂದು ಅವರನ್ನು ಹತ್ತಿರದಿಂದ ಬಲ್ಲವರು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದ್ದಾರೆ.

ಇದೀಗ ಸೆ.  5ರಂದು ಟ್ವೀಟ್ ಅಭಿಯಾನ ನಡೆಯಲಿದೆ. ಸೆಪ್ಟೆಂಬರ್ 13 ರಿಂದ ರಾಜ್ಯ ವಿಧಾನಸಭೆ ಅಧಿವೇಶನ ಆರಂಭವಾಗಲಿದೆ. ಇದರಿಂದ ಸೆ. 5ರ ಟ್ವೀಟ್ ಅಭಿಯಾನ ಬಹಳಷ್ಟು ಮಹತ್ವ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು