8:58 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ: ಕಾರಣ ಏನು?

28/09/2021, 16:09

ತುಮಕೂರು(reporterkarnataka.com)
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗಿರಲು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭೆ ಚುನಾವಣೆ ಜತೆಗೆ, ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯೂ ಎದುರಾಯಿತು ಎಂದು ವಿವರಣೆ ನೀಡಿದ್ದಾರೆ.

ಎರಡು ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಬಾರಿ ತುಮಕೂರು ಜಿಲ್ಲಾ ಅಧ್ಯಕ್ಷನಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣ ಎಂದು ಅವರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಟ್ಟಾ ಅನುಯಾಯಿ ಆಗಿರುವ ಸುರೇಶ್ ಗೌಡ ಅವರ ರಾಜೀನಾಮೆ ಹಲವು ಪ್ರಶ್ನೆಗಳ ಉದ್ಭವಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು