11:53 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

Tumakuru | ಲೋಕಸಭೆ, ವಿಧಾನಸಭೆ ಚುನಾವಣೆ: ಒಬಿಸಿಗೂ ಮೀಸಲಾತಿ ಜಾರಿಗೆ ಹಕ್ಕೊತ್ತಾಯ

26/10/2025, 20:10

ತುಮಕೂರು(reporterkarnataka.com): ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳಲ್ಲೂ ಒಬಿಸಿಗೂ ಮೀಸಲಾತಿ ಜಾರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ.
ತುಮಕೂರಿನ ಮಧುಗಿರಿಯಲ್ಲಿ ರಾಜಣ್ಣ ಹೊಸ ದಾಳ ಉರುಳಿಸಿದ್ದಾರೆ.
ಕೇಂದ್ರ ಸಚಿವ ಅಮಿತ್ ಷಾ ಕ್ಷೇತ್ರ ಮರು ವಿಂಗಡಣೆ ವೇಳೆ ಮಹಿಳೆಯರಿಗೆ ಮೀಸಲಾತಿ ನೀಡಬೇಕು. ಈ ಬಾರಿ ಮಹಿಳಾ ಮೀಸಲಾತಿ ಜೊತೆಗೆ ಒಬಿಸಿಯವರಿಗೂ ಮೀಸಲಾತಿ ತರಬೇಕು. ತಳ ಸಮುದಾಯಗಳಿಗೆ ಸಮರ್ಪಕವಾಗಿ ರಾಜಕೀಯ ಅಧಿಕಾರ ಹಂಚಿಕೆಯಾಗುತ್ತಿಲ್ಲ.
ಸರ್ವರಿಗೂ ಸಮಪಾಲು ಸಮಬಾಳು ಎನ್ನುವ ರಾಜಕೀಯ ಪಕ್ಷಗಳು ಯಾರಿಗೆ ನೀಡಿದೆ ಎಂದು ಪ್ರಶ್ನಿಸಿದರು.
ಅಭಿವೃದ್ಧಿ ಕಡೆ ಗಮನಹರಿಸಲು ತಳ ಸಮುದಾಯಗಳಿಗೆ ರಾಜಕೀಯ ಅಧಿಕಾರ ದೊರೆಯುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಒಬಿಸಿಗಳಿಗೆ ಮೀಸಲಾತಿ ಜಾರಿಯಿಂದ ಸಮುದಾಯಕ್ಕೆ ಒಳಿತಾಗುತ್ತದೆ.
ಅಮೇರಿಕಾದಲ್ಲಿ ಅಧ್ಯಕ್ಷ ಸ್ಥಾನವನ್ನು ಎರಡು ಅವಧಿಗೆ ಮಾತ್ರ ಮೀಸಲಿರಿಸಿದೆ. ಭಾರತದಲ್ಲೂ ರೀತಿ ಜಾರಿ ಮಾಡಿದ್ರೆ ಯುವಜನತೆಗೆ ರಾಜಕೀಯ ಅಧಿಕಾರ ಸಿಗಲಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ರಾಜಕೀಯೇತರ ಗಣ್ಯರ ಜೊತೆ ಸಂವಾದ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು