1:49 AM Tuesday30 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ತುಂಬೆ: ನೇತ್ರಾವತಿಗೆ ಬಾಗಿನ‌ ಅರ್ಪಣೆ, ಗಂಗಾ ಪೂಜೆ; ಜಲಸಿರಿ ಪೂರ್ಣಗೊಂಡಲ್ಲಿ ದಿನದ 24 ತಾಸು ನೀರು: ಮೇಯರ್ ಮನೋಜ್

26/02/2025, 22:33

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ತುಂಬೆ ಕಿಂಡಿ ಅಣೆಕಟ್ಟು ಬಳಿ ನೇತ್ರಾವತಿ ನದಿಗೆ ಬಾಗಿನ ಸಮರ್ಪಣೆ ಮಾಡಿ ಗಂಗಾ ಪೂಜೆಯನ್ನು ಮಂಗಳೂರು ಮೇಯರ್ ಮನೋಜ್ ಕುಮಾರ್ ನೆರವೇರಿಸಿದರು.
ಮಂಗಳೂರು ಮಹಾನಗರಕ್ಕೆ ಮತ್ತು ಬಂಟ್ವಾಳ ‌ತಾಲೂಕಿನ ಹಲವು ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುತ್ತಿರುವ ನೇತ್ರಾವತಿ ನದಿ ಮಾತೆಗೆ ಸಮಾನ. ನದಿ ಪರಿಸರದ ಕೃಷಿಕರಿಗೆ ಅನ್ನದಾತೆಯಾಗಿದ್ದಾಳೆ. ನಿರಂತರವಾಗಿ ಹರಿದು ರೈತರ ಜೀವನಾಡಿಯಾಗಿದ್ದಾಳೆ.
ಸದ್ಯ 6 ಮೀಟರ್ ನೀರಿದ್ದು ನೀರಿನ ಕೊರತೆಯಾಗದು. ಎಡಿಬಿ 780 ಕೋಟಿ ವೆಚ್ಚದಲ್ಲಿ ಜಲಸಿರಿ ಕಾಮಗಾರಿ ನಡೆಯುತ್ತಿದೆ. ಅದು ಪೂರ್ಣಗೊಂಡಲ್ಲಿ ದಿನದ 24 ಗಂಟೆಯೂ ಮಂಗಳೂರಿಗೆ ನೀರು ಪೂರೈಕೆಯಾಗಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.
ಪಾಲಿಕೆ ವಿಪಕ್ಷ ನಾಯಕ‌ ಅನಿಲ್ ಕುಮಾರ್, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಉಪಮೇಯರ್ ಭಾನುಮತಿ, ಪಾಲಿಕೆ ಆಯುಕ್ತ ರವಿಚಂದ್ರ ನಾಯ್ಕ್,ಪಾಲಿಕೆ‌ ಸಚೇತಕ ಪ್ರೇಮಾನಂದ ಶೆಟ್ಟಿ, ಜಯಾನಂದ‌ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು