8:36 PM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ತುಂಬಾ ಸೆಂಟಿಮೆಂಟಲ್ ಕಣ್ರೀ ನಮ್ಮ ಸಿಎಂ: ಮುದ್ದಿನ ನಾಯಿ ಸತ್ತಾಗ ಕಣ್ಣೀರಿಟ್ಟ ಬೊಮ್ಮಾಯಿ !

28/07/2021, 21:07

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಣ್ಣೀರಿಟ್ಟ ಘಟನೆ ನಡೆದಿತ್ತು. ಸಿಎಂ ಆಗುವ ಕೇವಲ ಒಂದು ವಾರದ ಮುನ್ನ ಬೊಮ್ಮಾಯಿ ಅವರು ದುಃಖ ತಾಳಲಾಗದೆ ಕರ್ಚೀಫನ್ನು ಕಣ್ಣಿಗೆ ಒತ್ತಿಕೊಂಡಿದ್ದರು. ತನ್ನ ಕುಟುಂಬದ ಸದಸ್ಯರ ಎದುರೇ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು.


ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದಲ್ಲೇ ಈ ಘಟನೆ ನಡೆದಿತ್ತು. ಇವೆಲ್ಲ ನಡೆದಾಗ ಅವರು ಗೃಹ ಸಚಿವರಾಗಿದ್ದರು. ಅವರು ಸಾಕಿ ಸಲಹಿದ ಮುದ್ದಿನ ನಾಯಿ ಮೃತಪಟ್ಟಾಗ ಅವರು ದುಃಖ ತಾಳಲಾಗದೆ ಕಣ್ಣೀರು ಹಾಕಿದ್ದರು. ಈ ಕುರಿತು ವೀಡಿಯೊವೊಂದು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ವೈರಲ್ ಆಗಿದೆ. ಮುದ್ದಿನ ನಾಯಿಗೆ ಅಂತಿಮ ವಿದಾಯ ಹೇಳುವಾಗ ಬೊಮ್ಮಾಯಿ ಜತೆ ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ವಾನದ ಮೃತದೇಹದ ಮೇಲೆ ಹೂವಿನ ಹಾರ ಹಾಕಲಾಗಿತ್ತು.

ಬೊಮ್ಮಾಯಿ ಅವರು ನೆಲದಲ್ಲಿ ಮಂಡಿಯೂರಿ ಬಾಗಿ ಶ್ವಾನಕ್ಕೆ ಅಂತಿಮ ಮುತ್ತು ನೀಡಿದ್ದರು. ನಂತರ ದುಃಖ ತಾಳಲಾಗದೆ ಕಂಗಳನ್ನು ಕರ್ಚೀಫ್ ನಲ್ಲಿ ಒರಸಿಕೊಂಡರು. ಮುಖ್ಯಮಂತ್ರಿಯವರ ಪ್ರಾಣಿ ಪ್ರೇಮಕ್ಕೆ ಹಾಟ್ಸಾಪ್. 

ಇತ್ತೀಚಿನ ಸುದ್ದಿ

ಜಾಹೀರಾತು