2:27 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ತುಂಬಾ ಸೆಂಟಿಮೆಂಟಲ್ ಕಣ್ರೀ ನಮ್ಮ ಸಿಎಂ: ಮುದ್ದಿನ ನಾಯಿ ಸತ್ತಾಗ ಕಣ್ಣೀರಿಟ್ಟ ಬೊಮ್ಮಾಯಿ !

28/07/2021, 21:07

ಬೆಂಗಳೂರು(reporterkarnataka news): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇತ್ತೀಚೆಗೆ ಕಣ್ಣೀರಿಟ್ಟ ಘಟನೆ ನಡೆದಿತ್ತು. ಸಿಎಂ ಆಗುವ ಕೇವಲ ಒಂದು ವಾರದ ಮುನ್ನ ಬೊಮ್ಮಾಯಿ ಅವರು ದುಃಖ ತಾಳಲಾಗದೆ ಕರ್ಚೀಫನ್ನು ಕಣ್ಣಿಗೆ ಒತ್ತಿಕೊಂಡಿದ್ದರು. ತನ್ನ ಕುಟುಂಬದ ಸದಸ್ಯರ ಎದುರೇ ಬೊಮ್ಮಾಯಿ ಅವರು ಬಿಕ್ಕಿ ಬಿಕ್ಕಿ ಅತ್ತಿದ್ದರು.


ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸದಲ್ಲೇ ಈ ಘಟನೆ ನಡೆದಿತ್ತು. ಇವೆಲ್ಲ ನಡೆದಾಗ ಅವರು ಗೃಹ ಸಚಿವರಾಗಿದ್ದರು. ಅವರು ಸಾಕಿ ಸಲಹಿದ ಮುದ್ದಿನ ನಾಯಿ ಮೃತಪಟ್ಟಾಗ ಅವರು ದುಃಖ ತಾಳಲಾಗದೆ ಕಣ್ಣೀರು ಹಾಕಿದ್ದರು. ಈ ಕುರಿತು ವೀಡಿಯೊವೊಂದು ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗುತ್ತಿದ್ದಂತೆ ವೈರಲ್ ಆಗಿದೆ. ಮುದ್ದಿನ ನಾಯಿಗೆ ಅಂತಿಮ ವಿದಾಯ ಹೇಳುವಾಗ ಬೊಮ್ಮಾಯಿ ಜತೆ ಕುಟುಂಬಸ್ಥರು ಉಪಸ್ಥಿತರಿದ್ದರು. ಶ್ವಾನದ ಮೃತದೇಹದ ಮೇಲೆ ಹೂವಿನ ಹಾರ ಹಾಕಲಾಗಿತ್ತು.

ಬೊಮ್ಮಾಯಿ ಅವರು ನೆಲದಲ್ಲಿ ಮಂಡಿಯೂರಿ ಬಾಗಿ ಶ್ವಾನಕ್ಕೆ ಅಂತಿಮ ಮುತ್ತು ನೀಡಿದ್ದರು. ನಂತರ ದುಃಖ ತಾಳಲಾಗದೆ ಕಂಗಳನ್ನು ಕರ್ಚೀಫ್ ನಲ್ಲಿ ಒರಸಿಕೊಂಡರು. ಮುಖ್ಯಮಂತ್ರಿಯವರ ಪ್ರಾಣಿ ಪ್ರೇಮಕ್ಕೆ ಹಾಟ್ಸಾಪ್. 

ಇತ್ತೀಚಿನ ಸುದ್ದಿ

ಜಾಹೀರಾತು