10:32 PM Tuesday22 - July 2025
ಬ್ರೇಕಿಂಗ್ ನ್ಯೂಸ್
Davanagere | ವೀರಶೈವ ಲಿಂಗಾಯತ ಎಲ್ಲ ಗುರು ಭಕ್ತರು ಒಂದಾದರೆ ನಮ್ಮನ್ನು ತಡೆಯುವವರು… Chikkamagaluru | ಬಣಕಲ್ ಪ್ರೌಢ ಶಾಲೆಯಲ್ಲಿ ಲಾಸ್ಟ್ ಬೆಂಚ್ ಸ್ಟೂಡೆಂಟ್ಸ್ ಪರಿಕಲ್ಪನೆಗೆ ಮಂಗಳ:… Kodagu | ಮಹಿಳೆಗೆ ಹಲ್ಲೆ ನಡೆಸಿ ಸರ ಅಪಹರಣ: ಗ್ರಾಮಸ್ಥರ ಕೈಗೆ ಸಿಕ್ಕಿ… ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:…

ಇತ್ತೀಚಿನ ಸುದ್ದಿ

ತುಮಕೂರು: 115 ಮಕ್ಕಳಿಗೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ

01/04/2022, 17:26

ತುಮಕೂರು(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜಯಂತ್ಯುತ್ಸವ ಪ್ರಯುಕ್ತ 115 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠಕ್ಕೆ ಆಗಮಿಸಿ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು. ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. 

ಬೀದರ್, ರಾಯಚೂರು ಸೇರಿದಂತೆ ಎಲ್ಲ ಭಾಗದಿಂದ ಎಲ್ಲ ಧರ್ಮದ ಮಕ್ಕಳು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಡ ಮಕ್ಕಳಿಗೆ ನಾಮಕರಣ ಮಾಡುವ ಮೂಲಕ ಮಕ್ಕಳಿಗೆ ಬೇಕಾದ ಎಲ್ಲ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅನ್ನದಾನ ಸೇವಾ ಟ್ರಸ್ಟ್ ಅಧ್ಯಕ್ಷ  ಜಯಣ್ಣ ಹೇಳಿದರು.

ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯ ಹೆಸರು ನಾಮಕರಣ ಮಾಡುವ ಮೂಲಕ ಸ್ವಾಮೀಜಿಯ ಹೆಸರನ್ನು ಎಲ್ಲ ಕಡೆ ಹರಡುವ ಕೆಲಸ ಮಾಡಲಾಗುತ್ತಿದೆ. ಕಳೆದು 3 ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟ್‌ನ ಸದಸ್ಯೆ ಅನುರಾಧ ವಿ.ಪಾಟೀಲ್ 

ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು