5:59 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತುಮಕೂರು: 115 ಮಕ್ಕಳಿಗೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ಹೆಸರು ನಾಮಕರಣ

01/04/2022, 17:26

ತುಮಕೂರು(reporterkarnataka.com): ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯ 115ನೇ ಜಯಂತ್ಯುತ್ಸವ ಪ್ರಯುಕ್ತ 115 ಮಕ್ಕಳಿಗೆ ಸ್ವಾಮೀಜಿಯವರ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ಶುಕ್ರವಾರ ನಡೆಯಿತು

ರಾಜ್ಯದ ವಿವಿಧ ಜಿಲ್ಲೆಗಳಿಂದ ಮಠಕ್ಕೆ ಆಗಮಿಸಿ ಮಕ್ಕಳಿಗೆ ನಾಮಕರಣ ಮಾಡುವುದರ ಜೊತೆಗೆ ಮಕ್ಕಳಿಗೆ ಬೇಕಾದ ತೊಟ್ಟಿಲು, ಹಾಸಿಗೆ ಸೇರಿದಂತೆ ಇತರೆ ಪರಿಕರಗಳನ್ನು ಉಚಿತವಾಗಿ ವಿತರಿಸಲಾಯಿತು. ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. 

ಬೀದರ್, ರಾಯಚೂರು ಸೇರಿದಂತೆ ಎಲ್ಲ ಭಾಗದಿಂದ ಎಲ್ಲ ಧರ್ಮದ ಮಕ್ಕಳು ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಬಡ ಮಕ್ಕಳಿಗೆ ನಾಮಕರಣ ಮಾಡುವ ಮೂಲಕ ಮಕ್ಕಳಿಗೆ ಬೇಕಾದ ಎಲ್ಲ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಅನ್ನದಾನ ಸೇವಾ ಟ್ರಸ್ಟ್ ಅಧ್ಯಕ್ಷ  ಜಯಣ್ಣ ಹೇಳಿದರು.

ಮಕ್ಕಳಿಗೆ ಶಿವಕುಮಾರ ಸ್ವಾಮೀಜಿಯ ಹೆಸರು ನಾಮಕರಣ ಮಾಡುವ ಮೂಲಕ ಸ್ವಾಮೀಜಿಯ ಹೆಸರನ್ನು ಎಲ್ಲ ಕಡೆ ಹರಡುವ ಕೆಲಸ ಮಾಡಲಾಗುತ್ತಿದೆ. ಕಳೆದು 3 ವರ್ಷಗಳಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಟ್ರಸ್ಟ್‌ನ ಸದಸ್ಯೆ ಅನುರಾಧ ವಿ.ಪಾಟೀಲ್ 

ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು