4:15 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ

ಇತ್ತೀಚಿನ ಸುದ್ದಿ

ತುಂಗಭದ್ರಾ ಹಿನ್ನೀರಿನಿಂದ ಚಿಕ್ಕಕೆರೆಯ ಏರಿಯ ಮೇಲೆ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆಗೆ ವಿರೋಧ: ಪ್ರತಿಭಟನೆ 

17/02/2022, 12:45

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿಕ್ಕ ಕೆರೆಯ ಏರಿಯ ಮೇಲೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಅಳವಡಿಕೆ ವಿರೋಧಿಸಿ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ರೈತರು ಬುಧವಾರ ಪ್ರತಿಭಟನೆ ನಡೆಸಿದರು. 

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಕೆರೆ ಏರಿ ರಾಜ್ಯ ಹೆದ್ದಾರಿ 45 ಆಗಿದೆ. ಆದರೆ ಕೆರೆಯ ಏರಿ ಕಿರಿದಾಗಿದೆ. ಇದರ ಮೇಲೆ ಪೈಪ್ ಲೈನ್ ಅಳವಡಿಸುವುದುರಿಂದ ಅಪಾಯ ಹೆಚ್ಚಾಗಿದೆ. ಪಪಂ ಕುಡಿಯುವ ನೀರು ಪೂರೈಸುವ ಪೈಪ್ ಲೈನ್‍ನ್ನು ಕೆರೆ ಏರಿಯ ಮೇಲೆ ಅಳವಡಿಸಿತ್ತು. ಸೋರುವಿಕೆ ಸಮಸ್ಯೆಯಿಂದ ಪೈಪ್ ಲೈನ್ ಪದೇ ಪದೇ ಹಾಳಾಗಿ ಹೆದ್ದಾರಿ ಹಾಳಾಗುತ್ತಿತ್ತು. ಹೀಗಾಗಿ ಪಪಂ ಕುಡಿಯುವ ನೀರು ಪೂರೈಸುವ ಪೈಪ್‍ಗಳನ್ನು ಕೆರೆಯ ಪಕ್ಕದಲ್ಲಿ ಕೊಂಡೊಯ್ಯಲಾಗಿದೆ. ಇದೀಗ ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆ  45 ಗ್ರಾಮಗಳಿಗೆ ನೀರು ಪೂರೈಸುವ ಬೃಹತ್ ಪೈಪ್‍ಗಳನ್ನು ಇದೇ ಕೆರೆ ಏರಿ ಅಳವಡಿಸಲು ಮುಂದಾಗಿದೆ.

ಪಟ್ಟಣ ಪಂಚಾಯತ್ ಸದಸ್ಯ ಜಿ.ಆರ್.ರವಿಕುಮಾರ್ ಮಾತನಾಡಿ, ನಾಯಕನಹಟ್ಟಿ-ಗಂಗಯ್ಯನಹಟ್ಟಿ ನಡುವೆ ಕೆರೆಯ ಮೇಲೆ ಪೈಪ್ ಅಳವಡಿಕೆಗೆ ಸಣ್ಣ ನೀರಾವರಿ ಇಲಾಖೆ 31.08.2021 ರಂದು ಅನುಮತಿ ನೀಡಿದೆ. ನೆಲದಿಂದ 1.2 ಮೀಟರ್ ಆಳದಲ್ಲಿ ಪೈಪ್‍ಗಳನ್ನು ಅಳವಡಿಸಲು ಅನುಮತಿ ನೀಡಿದೆ. ಇದರಿಂದ ಸಣ್ಣ ಕೆರೆ ಏರಿಗೆ ಅಪಾಯವಿದೆ. ತಿಪ್ಪೇರುದ್ರಸ್ವಾಮಿಗಳು ನಿರ್ಮಿಸಿದ ಐತಿಹಾಸಿಕ ಕೆರೆಗೆ ಅಪಾಯ ಉಂಟುಮಾಡುವ ಕಾಮಗಾರಿ ಇದಾಗಿದೆ. ಪೈಪ್ ಲೈನ್‍ನ್ನು ಕೆರೆಯಲ್ಲಿ ಅಥವ ಕೆರೆಯ ಏರಿಯ ಹೊರ ಬದಿಯಲ್ಲಿ ಅಳವಡಿಸಬಹುದಾಗಿದೆ. ಇದರಿಂದ ಕೆರೆಗೆ ಯಾವುದೇ ಅಪಾಯವಿಲ್ಲ. ಯಾವುದೇ ಕಾರಣಕ್ಕೂ ಕೆರೆ ಏರಿ ಮೇಲೆ ಪೈಪ್ ಅಳವಡಿಕೆಗೆ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  

ಪಿಡಬ್ಲೂಡಿ, ಪಪಂ, ಕುಡಿಯುವ ನೀರು ಪೂರೈಕೆ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಚರ್ಚೆ ನಡೆಸಿ ತೀರ್ಮಾನಿಸುವುದಾಗಿ ಪ್ರತಿಭಟನಕಾರರಿಗೆ ತಿಳಿಸಿದರು. ಹೀಗಾಗಿ ಕಾಮಗಾರಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಪಪಂ ಮುಖ್ಯಾಧಿಕಾರಿ ಕೋಡಿ ಭೀಮರಾಯ, ಕೌನ್ಸಿಲರ್ ತಿಪ್ಪೇಸ್ವಾಮಿ, ಮಾಜಿ ಕೌನ್ಸಿಲರ್ ಬಸಣ್ಣ, ಮುಖಂಡರಾದ ಶ್ರೀಕಾಂತ, ಪಂಚಾಕ್ಷರಯ್ಯ ಮತ್ತಿತರರಿದ್ದರು.    

ಸಣ್ಣ ನೀರಾವರಿ ಇಲಾಖೆ ಎಇಇ, ಗುರು ಬಸವರಾಜಯ್ಯ, ಕೆರೆ ಏರಿಗೆ ಹಾನಿಯಾಗುವಂತೆ ಪೈಪ್ ಲೈನ್ ಹಾಕಲು ಅವಕಾಶವಿಲ್ಲ. ಜತೆಗೆ ಈಗ ಹಾಕಲಾಗುತ್ತಿರುವ ಪೈಪ್‍ಗಳು ಪಿವಿಸಿ ಪೈಪ್‍ಗಳಲ್ಲ. ಡಿಐ (ಡಕ್ಟೈಲ್ ಐರನ್) ಎಂದು ಕರೆಯಲಾಗುವ ಈ ಪೈಪ್ ಗಳು ತುಕ್ಕು ಹಿಡಿಯದ ಹಾಗೂ ಸೋರಿಕೆಯಿಲ್ಲದ ಹೆಚ್ಚಿನ ಒತ್ತಡವನ್ನು ತಡೆಯಬಲ್ಲವಾಗಿವೆ. ಸಾರ್ವಜನಿಕ ವಿರೋಧವನ್ನು ಪರಿಗಣಿಸಿ ತಕ್ಷಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಶೀಘ್ರದಲ್ಲಿ ಪಿಡಬ್ಲೂಡಿ, ಪಪಂ ಹಾಗೂ ನೀರು ಪೂರೈಕೆ ಇಲಾಖೆ ಅಧಿಕಾರಿಗಳ ಜತೆಗೆ ಸ್ಥಳ ಪರಿಶೀಲನೆ ನಡೆಸಲಾಗುವುದು. 

ಫೋಟೋಡಿ16-ಸಿಎಲ್‍ಕೆ3  ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಕೆರೆ ಏರಿ ಮೇಲೆ ಪೈಪ್ ಲೈನ್ ಕಾಮಗಾರಿ ತಡೆ ಪ್ರದೇಶಕ್ಕೆ ಕುಡಿಯುವ ನೀರು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು