5:49 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ತುಂಗಭದ್ರಾ ಹಿನ್ನೀರಿನಿಂದ ಚಿಕ್ಕಕೆರೆಯ ಏರಿಯ ಮೇಲೆ ಕುಡಿಯುವ ನೀರು ಪೈಪ್ ಲೈನ್ ಅಳವಡಿಕೆಗೆ ವಿರೋಧ: ಪ್ರತಿಭಟನೆ 

17/02/2022, 12:45

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿಕ್ಕ ಕೆರೆಯ ಏರಿಯ ಮೇಲೆ ತುಂಗಭದ್ರಾ ಹಿನ್ನೀರಿನಿಂದ ಕುಡಿಯುವ ನೀರು ಪೂರೈಸುವ ಪೈಪ್ ಲೈನ್ ಅಳವಡಿಕೆ ವಿರೋಧಿಸಿ ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ರೈತರು ಬುಧವಾರ ಪ್ರತಿಭಟನೆ ನಡೆಸಿದರು. 

ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಕೆರೆ ಏರಿ ರಾಜ್ಯ ಹೆದ್ದಾರಿ 45 ಆಗಿದೆ. ಆದರೆ ಕೆರೆಯ ಏರಿ ಕಿರಿದಾಗಿದೆ. ಇದರ ಮೇಲೆ ಪೈಪ್ ಲೈನ್ ಅಳವಡಿಸುವುದುರಿಂದ ಅಪಾಯ ಹೆಚ್ಚಾಗಿದೆ. ಪಪಂ ಕುಡಿಯುವ ನೀರು ಪೂರೈಸುವ ಪೈಪ್ ಲೈನ್‍ನ್ನು ಕೆರೆ ಏರಿಯ ಮೇಲೆ ಅಳವಡಿಸಿತ್ತು. ಸೋರುವಿಕೆ ಸಮಸ್ಯೆಯಿಂದ ಪೈಪ್ ಲೈನ್ ಪದೇ ಪದೇ ಹಾಳಾಗಿ ಹೆದ್ದಾರಿ ಹಾಳಾಗುತ್ತಿತ್ತು. ಹೀಗಾಗಿ ಪಪಂ ಕುಡಿಯುವ ನೀರು ಪೂರೈಸುವ ಪೈಪ್‍ಗಳನ್ನು ಕೆರೆಯ ಪಕ್ಕದಲ್ಲಿ ಕೊಂಡೊಯ್ಯಲಾಗಿದೆ. ಇದೀಗ ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆ  45 ಗ್ರಾಮಗಳಿಗೆ ನೀರು ಪೂರೈಸುವ ಬೃಹತ್ ಪೈಪ್‍ಗಳನ್ನು ಇದೇ ಕೆರೆ ಏರಿ ಅಳವಡಿಸಲು ಮುಂದಾಗಿದೆ.

ಪಟ್ಟಣ ಪಂಚಾಯತ್ ಸದಸ್ಯ ಜಿ.ಆರ್.ರವಿಕುಮಾರ್ ಮಾತನಾಡಿ, ನಾಯಕನಹಟ್ಟಿ-ಗಂಗಯ್ಯನಹಟ್ಟಿ ನಡುವೆ ಕೆರೆಯ ಮೇಲೆ ಪೈಪ್ ಅಳವಡಿಕೆಗೆ ಸಣ್ಣ ನೀರಾವರಿ ಇಲಾಖೆ 31.08.2021 ರಂದು ಅನುಮತಿ ನೀಡಿದೆ. ನೆಲದಿಂದ 1.2 ಮೀಟರ್ ಆಳದಲ್ಲಿ ಪೈಪ್‍ಗಳನ್ನು ಅಳವಡಿಸಲು ಅನುಮತಿ ನೀಡಿದೆ. ಇದರಿಂದ ಸಣ್ಣ ಕೆರೆ ಏರಿಗೆ ಅಪಾಯವಿದೆ. ತಿಪ್ಪೇರುದ್ರಸ್ವಾಮಿಗಳು ನಿರ್ಮಿಸಿದ ಐತಿಹಾಸಿಕ ಕೆರೆಗೆ ಅಪಾಯ ಉಂಟುಮಾಡುವ ಕಾಮಗಾರಿ ಇದಾಗಿದೆ. ಪೈಪ್ ಲೈನ್‍ನ್ನು ಕೆರೆಯಲ್ಲಿ ಅಥವ ಕೆರೆಯ ಏರಿಯ ಹೊರ ಬದಿಯಲ್ಲಿ ಅಳವಡಿಸಬಹುದಾಗಿದೆ. ಇದರಿಂದ ಕೆರೆಗೆ ಯಾವುದೇ ಅಪಾಯವಿಲ್ಲ. ಯಾವುದೇ ಕಾರಣಕ್ಕೂ ಕೆರೆ ಏರಿ ಮೇಲೆ ಪೈಪ್ ಅಳವಡಿಕೆಗೆ ಅವಕಾಶ ನೀಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.  

ಪಿಡಬ್ಲೂಡಿ, ಪಪಂ, ಕುಡಿಯುವ ನೀರು ಪೂರೈಕೆ ಇಲಾಖೆ ಹಾಗೂ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಚರ್ಚೆ ನಡೆಸಿ ತೀರ್ಮಾನಿಸುವುದಾಗಿ ಪ್ರತಿಭಟನಕಾರರಿಗೆ ತಿಳಿಸಿದರು. ಹೀಗಾಗಿ ಕಾಮಗಾರಿ ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಪಪಂ ಮುಖ್ಯಾಧಿಕಾರಿ ಕೋಡಿ ಭೀಮರಾಯ, ಕೌನ್ಸಿಲರ್ ತಿಪ್ಪೇಸ್ವಾಮಿ, ಮಾಜಿ ಕೌನ್ಸಿಲರ್ ಬಸಣ್ಣ, ಮುಖಂಡರಾದ ಶ್ರೀಕಾಂತ, ಪಂಚಾಕ್ಷರಯ್ಯ ಮತ್ತಿತರರಿದ್ದರು.    

ಸಣ್ಣ ನೀರಾವರಿ ಇಲಾಖೆ ಎಇಇ, ಗುರು ಬಸವರಾಜಯ್ಯ, ಕೆರೆ ಏರಿಗೆ ಹಾನಿಯಾಗುವಂತೆ ಪೈಪ್ ಲೈನ್ ಹಾಕಲು ಅವಕಾಶವಿಲ್ಲ. ಜತೆಗೆ ಈಗ ಹಾಕಲಾಗುತ್ತಿರುವ ಪೈಪ್‍ಗಳು ಪಿವಿಸಿ ಪೈಪ್‍ಗಳಲ್ಲ. ಡಿಐ (ಡಕ್ಟೈಲ್ ಐರನ್) ಎಂದು ಕರೆಯಲಾಗುವ ಈ ಪೈಪ್ ಗಳು ತುಕ್ಕು ಹಿಡಿಯದ ಹಾಗೂ ಸೋರಿಕೆಯಿಲ್ಲದ ಹೆಚ್ಚಿನ ಒತ್ತಡವನ್ನು ತಡೆಯಬಲ್ಲವಾಗಿವೆ. ಸಾರ್ವಜನಿಕ ವಿರೋಧವನ್ನು ಪರಿಗಣಿಸಿ ತಕ್ಷಣ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿದೆ. ಶೀಘ್ರದಲ್ಲಿ ಪಿಡಬ್ಲೂಡಿ, ಪಪಂ ಹಾಗೂ ನೀರು ಪೂರೈಕೆ ಇಲಾಖೆ ಅಧಿಕಾರಿಗಳ ಜತೆಗೆ ಸ್ಥಳ ಪರಿಶೀಲನೆ ನಡೆಸಲಾಗುವುದು. 

ಫೋಟೋಡಿ16-ಸಿಎಲ್‍ಕೆ3  ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಕೆರೆ ಏರಿ ಮೇಲೆ ಪೈಪ್ ಲೈನ್ ಕಾಮಗಾರಿ ತಡೆ ಪ್ರದೇಶಕ್ಕೆ ಕುಡಿಯುವ ನೀರು ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು