10:39 AM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕುಖ್ಯಾತ ಚಡ್ಡಿ ಗ್ಯಾಂಗಿನ ಇಬ್ಬರು ಸದಸ್ಯರ ಬಂಧನ: ಚಿನ್ನಾಭರಣ, ನಗದು ಸಹಿತ 32 ಲಕ್ಷ ಮೌಲ್ಯದ ಸೊತ್ತು ವಶ

25/10/2025, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಖ್ಯಾತ ಚಡ್ಡಿ ಗ್ಯಾಂಗಿನ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕದ್ದ 32 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪು ಪವಾರ್ ಹಾಗೂ ಮಂಗೇಶ್ ಅಂಕುಶ್ ಶಿಂಧೆ ಬಂಧಿತ ಆರೋಪಿಗಳು.


ಚಿಕ್ಕಮಗಳೂರು ನಗರ ಪೊಲೀಸರು ಈ ಕಾರ್ಯಚರಣೆ ನಡೆಸಿ ಚಡ್ಡಿ ಗ್ಯಾಂಗಿನ 17 ಪ್ರಕರಣಗಳನ್ನ ಭೇದಿಸಿದ್ದಾರೆ.
ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಚಡ್ಡಿ ಗ್ಯಾಂಗ್ ತಂಡ ಕಳ್ಳತನ ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಡ್ಡಿ ಗ್ಯಾಂಗ್ ಕಳ್ಳತನ‌ ಮಾಡುತ್ತಿತ್ತು.
ಆರೋಪಿಗಳಿಂದ 495 ಗ್ರಾಂ ಚಿನ್ನ, 1010 ಗ್ರಾಂ ಬೆಳ್ಳಿ, 75 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ನಗರದ ಪೊಲೀಸ್ ಕ್ವಾಟ್ರಸ್ಸ್ ಕಳ್ಳತನ ಪ್ರಕರಣದ ತನಿಖೆಗಾಗಿ
ಎಸ್ಪಿ ವಿಕ್ರಂ ಅವರು ವಿಶೇಷ ತಂಡ ರಚಿಸಿದ್ದರು. ಎಎಸ್ಪಿ ಜಯಕುಮಾರ್, ಡಿವೈಎಸ್ಪಿ ಶೈಲೇಂದ್ರ, ನಗರ ರಾಣೆ ಪಿಐ ಅಭಯ್ ಪ್ರಕಾಶ್ ನೇತೃತ್ವದ ತಂಡ ಕಾರ್ಯನಿರ್ವಹಿಸಿತ್ತು.
ಎರಡೂವರೆ ತಿಂಗಳಲ್ಲಿ 400ಕ್ಕೂ ಹೆಚ್ಚು ಸಿಸಿಟಿವಿ ಫುಟೇಜ್ ಪೊಲೀಸರು ಕಲೆಕ್ಟ್ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು