11:32 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕುಖ್ಯಾತ ಚಡ್ಡಿ ಗ್ಯಾಂಗಿನ ಇಬ್ಬರು ಸದಸ್ಯರ ಬಂಧನ: ಚಿನ್ನಾಭರಣ, ನಗದು ಸಹಿತ 32 ಲಕ್ಷ ಮೌಲ್ಯದ ಸೊತ್ತು ವಶ

25/10/2025, 22:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕುಖ್ಯಾತ ಚಡ್ಡಿ ಗ್ಯಾಂಗಿನ ಇಬ್ಬರು ಸದಸ್ಯರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಕದ್ದ 32 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಹಾರಾಷ್ಟ್ರ ಮೂಲದ ಪಪ್ಪು ಟಿಪ್ಪು ಪವಾರ್ ಹಾಗೂ ಮಂಗೇಶ್ ಅಂಕುಶ್ ಶಿಂಧೆ ಬಂಧಿತ ಆರೋಪಿಗಳು.


ಚಿಕ್ಕಮಗಳೂರು ನಗರ ಪೊಲೀಸರು ಈ ಕಾರ್ಯಚರಣೆ ನಡೆಸಿ ಚಡ್ಡಿ ಗ್ಯಾಂಗಿನ 17 ಪ್ರಕರಣಗಳನ್ನ ಭೇದಿಸಿದ್ದಾರೆ.
ಚಿಕ್ಕಮಗಳೂರು ಸೇರಿ ರಾಜ್ಯದ ವಿವಿಧ ಕಡೆಗಳಲ್ಲಿ ಚಡ್ಡಿ ಗ್ಯಾಂಗ್ ತಂಡ ಕಳ್ಳತನ ಮಾಡಿತ್ತು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಡ್ಡಿ ಗ್ಯಾಂಗ್ ಕಳ್ಳತನ‌ ಮಾಡುತ್ತಿತ್ತು.
ಆರೋಪಿಗಳಿಂದ 495 ಗ್ರಾಂ ಚಿನ್ನ, 1010 ಗ್ರಾಂ ಬೆಳ್ಳಿ, 75 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.
ನಗರದ ಪೊಲೀಸ್ ಕ್ವಾಟ್ರಸ್ಸ್ ಕಳ್ಳತನ ಪ್ರಕರಣದ ತನಿಖೆಗಾಗಿ
ಎಸ್ಪಿ ವಿಕ್ರಂ ಅವರು ವಿಶೇಷ ತಂಡ ರಚಿಸಿದ್ದರು. ಎಎಸ್ಪಿ ಜಯಕುಮಾರ್, ಡಿವೈಎಸ್ಪಿ ಶೈಲೇಂದ್ರ, ನಗರ ರಾಣೆ ಪಿಐ ಅಭಯ್ ಪ್ರಕಾಶ್ ನೇತೃತ್ವದ ತಂಡ ಕಾರ್ಯನಿರ್ವಹಿಸಿತ್ತು.
ಎರಡೂವರೆ ತಿಂಗಳಲ್ಲಿ 400ಕ್ಕೂ ಹೆಚ್ಚು ಸಿಸಿಟಿವಿ ಫುಟೇಜ್ ಪೊಲೀಸರು ಕಲೆಕ್ಟ್ ಮಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು