7:09 AM Sunday12 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು

07/06/2023, 22:00

ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹುಲಿ ನೇತ್ರಾವತಿ ನಡುವೆ ತೀವ್ರ ಕಾಳಗ ನಡೆದಿತ್ತು. ಇದರಲ್ಲಿ ಹೆಣ್ಣು ಹುಲಿ ನೇತ್ರಾವತಿಯ ಮುಖಕ್ಕೆ ತೀವ್ರವಾದ ಗಾಯಗಳಾಗಿತ್ತು. ಗಂಡು ಹುಲಿ ರೇವಾ ನೇತ್ರಾವತಿಯ ಸಂಪರ್ಕ ಬಯಸಿ ಬಂದಾಗ ನೇತ್ರಾವತಿ ಪ್ರತಿರೋಧ ಒಡ್ಡಿತ್ತು. ಆ ಸಂದರ್ಭದಲ್ಲಿ ಎರಡೂ ಹುಲಿಗಳ ನಡುವೆ ಕಾದಾಟ ನಡೆದಿತ್ತು. ಪಿಲಿಕುಳ ಜೈವಿಕ ಉದ್ಯಾವನದ ಸಿಬ್ಬಂದಿಗಳು ಕಾಳಗ ನಿರತ ಹುಲಿಗಳನ್ನು ಬೇರ್ಪಡಿಸಿ ಬೋನಿಗೆ ಹಾಕಿದ್ದರು. ಗಾಯಗೊಂಡಿದ್ದ ನೇತ್ರಾವತಿಗೆ ಜೈವಿಕ ಉದ್ಯಾವನದ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಬುಧವಾರ ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗಲೇ ಹುಲಿ ಕುಸಿದು ಬಿದ್ದು ಪ್ರಾಣ ಬಿಟ್ಟಿದೆ. ಗಾಯಗೊಂಡಿದ್ದ ನೇತ್ರಾವತಿಗೆ ತೀವ್ರ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು