6:22 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು

07/06/2023, 22:00

ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹುಲಿ ನೇತ್ರಾವತಿ ನಡುವೆ ತೀವ್ರ ಕಾಳಗ ನಡೆದಿತ್ತು. ಇದರಲ್ಲಿ ಹೆಣ್ಣು ಹುಲಿ ನೇತ್ರಾವತಿಯ ಮುಖಕ್ಕೆ ತೀವ್ರವಾದ ಗಾಯಗಳಾಗಿತ್ತು. ಗಂಡು ಹುಲಿ ರೇವಾ ನೇತ್ರಾವತಿಯ ಸಂಪರ್ಕ ಬಯಸಿ ಬಂದಾಗ ನೇತ್ರಾವತಿ ಪ್ರತಿರೋಧ ಒಡ್ಡಿತ್ತು. ಆ ಸಂದರ್ಭದಲ್ಲಿ ಎರಡೂ ಹುಲಿಗಳ ನಡುವೆ ಕಾದಾಟ ನಡೆದಿತ್ತು. ಪಿಲಿಕುಳ ಜೈವಿಕ ಉದ್ಯಾವನದ ಸಿಬ್ಬಂದಿಗಳು ಕಾಳಗ ನಿರತ ಹುಲಿಗಳನ್ನು ಬೇರ್ಪಡಿಸಿ ಬೋನಿಗೆ ಹಾಕಿದ್ದರು. ಗಾಯಗೊಂಡಿದ್ದ ನೇತ್ರಾವತಿಗೆ ಜೈವಿಕ ಉದ್ಯಾವನದ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಬುಧವಾರ ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗಲೇ ಹುಲಿ ಕುಸಿದು ಬಿದ್ದು ಪ್ರಾಣ ಬಿಟ್ಟಿದೆ. ಗಾಯಗೊಂಡಿದ್ದ ನೇತ್ರಾವತಿಗೆ ತೀವ್ರ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು