2:04 AM Saturday13 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು

07/06/2023, 22:00

ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹುಲಿ ನೇತ್ರಾವತಿ ನಡುವೆ ತೀವ್ರ ಕಾಳಗ ನಡೆದಿತ್ತು. ಇದರಲ್ಲಿ ಹೆಣ್ಣು ಹುಲಿ ನೇತ್ರಾವತಿಯ ಮುಖಕ್ಕೆ ತೀವ್ರವಾದ ಗಾಯಗಳಾಗಿತ್ತು. ಗಂಡು ಹುಲಿ ರೇವಾ ನೇತ್ರಾವತಿಯ ಸಂಪರ್ಕ ಬಯಸಿ ಬಂದಾಗ ನೇತ್ರಾವತಿ ಪ್ರತಿರೋಧ ಒಡ್ಡಿತ್ತು. ಆ ಸಂದರ್ಭದಲ್ಲಿ ಎರಡೂ ಹುಲಿಗಳ ನಡುವೆ ಕಾದಾಟ ನಡೆದಿತ್ತು. ಪಿಲಿಕುಳ ಜೈವಿಕ ಉದ್ಯಾವನದ ಸಿಬ್ಬಂದಿಗಳು ಕಾಳಗ ನಿರತ ಹುಲಿಗಳನ್ನು ಬೇರ್ಪಡಿಸಿ ಬೋನಿಗೆ ಹಾಕಿದ್ದರು. ಗಾಯಗೊಂಡಿದ್ದ ನೇತ್ರಾವತಿಗೆ ಜೈವಿಕ ಉದ್ಯಾವನದ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಬುಧವಾರ ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗಲೇ ಹುಲಿ ಕುಸಿದು ಬಿದ್ದು ಪ್ರಾಣ ಬಿಟ್ಟಿದೆ. ಗಾಯಗೊಂಡಿದ್ದ ನೇತ್ರಾವತಿಗೆ ತೀವ್ರ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು