3:15 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು

07/06/2023, 22:00

ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹುಲಿ ನೇತ್ರಾವತಿ ನಡುವೆ ತೀವ್ರ ಕಾಳಗ ನಡೆದಿತ್ತು. ಇದರಲ್ಲಿ ಹೆಣ್ಣು ಹುಲಿ ನೇತ್ರಾವತಿಯ ಮುಖಕ್ಕೆ ತೀವ್ರವಾದ ಗಾಯಗಳಾಗಿತ್ತು. ಗಂಡು ಹುಲಿ ರೇವಾ ನೇತ್ರಾವತಿಯ ಸಂಪರ್ಕ ಬಯಸಿ ಬಂದಾಗ ನೇತ್ರಾವತಿ ಪ್ರತಿರೋಧ ಒಡ್ಡಿತ್ತು. ಆ ಸಂದರ್ಭದಲ್ಲಿ ಎರಡೂ ಹುಲಿಗಳ ನಡುವೆ ಕಾದಾಟ ನಡೆದಿತ್ತು. ಪಿಲಿಕುಳ ಜೈವಿಕ ಉದ್ಯಾವನದ ಸಿಬ್ಬಂದಿಗಳು ಕಾಳಗ ನಿರತ ಹುಲಿಗಳನ್ನು ಬೇರ್ಪಡಿಸಿ ಬೋನಿಗೆ ಹಾಕಿದ್ದರು. ಗಾಯಗೊಂಡಿದ್ದ ನೇತ್ರಾವತಿಗೆ ಜೈವಿಕ ಉದ್ಯಾವನದ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಬುಧವಾರ ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗಲೇ ಹುಲಿ ಕುಸಿದು ಬಿದ್ದು ಪ್ರಾಣ ಬಿಟ್ಟಿದೆ. ಗಾಯಗೊಂಡಿದ್ದ ನೇತ್ರಾವತಿಗೆ ತೀವ್ರ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು