5:44 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಿಲಿಕುಳ ಜೈವಿಕ ಉದ್ಯಾವನ: 2 ಹುಲಿಗಳ ನಡುವೆ ತೀವ್ರ ಕಾಳಗ; ಗಾಯಗೊಂಡಿದ್ದ ಹೆಣ್ಣು ಹುಲಿ ಸಾವು

07/06/2023, 22:00

ಮಂಗಳೂರು (reporterkarnataka.com): ನಗರದ ಹೊರವಲಯದ ಪಿಲಿಕುಳ ಜೈವಿಕ ಉದ್ಯಾವನದಲ್ಲಿ ಎರಡು ಹುಲಿಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿ ನೇತ್ರಾವತಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಜೂನ್ 4ರಂದು 8 ವರ್ಷದ ಗಂಡು ಹುಲಿ ರೇವಾ ಮತ್ತು 15 ವರ್ಷದ ಹೆಣ್ಣು ಹುಲಿ ನೇತ್ರಾವತಿ ನಡುವೆ ತೀವ್ರ ಕಾಳಗ ನಡೆದಿತ್ತು. ಇದರಲ್ಲಿ ಹೆಣ್ಣು ಹುಲಿ ನೇತ್ರಾವತಿಯ ಮುಖಕ್ಕೆ ತೀವ್ರವಾದ ಗಾಯಗಳಾಗಿತ್ತು. ಗಂಡು ಹುಲಿ ರೇವಾ ನೇತ್ರಾವತಿಯ ಸಂಪರ್ಕ ಬಯಸಿ ಬಂದಾಗ ನೇತ್ರಾವತಿ ಪ್ರತಿರೋಧ ಒಡ್ಡಿತ್ತು. ಆ ಸಂದರ್ಭದಲ್ಲಿ ಎರಡೂ ಹುಲಿಗಳ ನಡುವೆ ಕಾದಾಟ ನಡೆದಿತ್ತು. ಪಿಲಿಕುಳ ಜೈವಿಕ ಉದ್ಯಾವನದ ಸಿಬ್ಬಂದಿಗಳು ಕಾಳಗ ನಿರತ ಹುಲಿಗಳನ್ನು ಬೇರ್ಪಡಿಸಿ ಬೋನಿಗೆ ಹಾಕಿದ್ದರು. ಗಾಯಗೊಂಡಿದ್ದ ನೇತ್ರಾವತಿಗೆ ಜೈವಿಕ ಉದ್ಯಾವನದ ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ ಬುಧವಾರ ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡುತ್ತಿರುವಾಗಲೇ ಹುಲಿ ಕುಸಿದು ಬಿದ್ದು ಪ್ರಾಣ ಬಿಟ್ಟಿದೆ. ಗಾಯಗೊಂಡಿದ್ದ ನೇತ್ರಾವತಿಗೆ ತೀವ್ರ ಹೃದಯಾಘಾತ ಉಂಟಾಗಿ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು