9:20 PM Thursday10 - April 2025
ಬ್ರೇಕಿಂಗ್ ನ್ಯೂಸ್
ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ… HDK | ವಿಧಾನ ಸೌಧ 3ನೇ ಮಹಡಿಯಲ್ಲಿ ಘಜ್ನಿ , ಘೋರಿ, ಮಲ್ಲಿಕ್…

ಇತ್ತೀಚಿನ ಸುದ್ದಿ

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ

14/08/2024, 20:23

ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂತರವಾಗಿ ನಡೆಯಬೇಕು. ಹೊಟ್ಟೆಯ ಹಸಿವಿನ ಜೊತೆಗೆ ಅಧ್ಯಾತ್ಮದ ಹಸಿವು ಹೆಚ್ಚಾಗಬೇಕು. ಸಹಕಾರ , ಉಪಕಾರ ಸ್ಮರಣೆ, ಅನುಭೂತಿ ಪ್ರತಿಯೊಬ್ಬನಲ್ಲಿಯೂ ಇರಬೇಕು ಎಂದು ಮಾಣಿಲ ಶ್ರೀಧಾಮ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ದುರ್ಗಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ಸಮಾರೋಪದ ಅಂಗವಾಗಿ 48 ದಿನಗಳ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ, ಬಾಲಭೋಜನ ಕಾಯಕ್ರಮದಲ್ಲಿ ಆಶೀರ್ವಚನ ನೀಡಿದರು.


ದ.ಕ. ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಶಿಕ್ಷಕ ಯತಿರಾಜ , ಮುಳಿಯ ದಂಬೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ ಆನಂದ ಶೆಟ್ಟಿ, ಸೋಮೇಶ್ವರ ಪರಿಜ್ಞಾನ ಕಾಲೇಜು ಉಪನ್ಯಾಸಕಿ ಸುಶ್ಮಾ ರಾಕೇಶ್ ಮಂಗಳೂರು, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಪ್ರತಿಷ್ಠಾನದ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಅಧ್ಯಕ್ಷೆ ವನಿತಾ ವಿ. ಶೆಟ್ಟಿ , ಶ್ರೀಧಾಮ ಮಿತ್ರಮಂಡಳಿಯ ಕಾರ್ಯದರ್ಶಿ ಜಗನ್ನಾಥ ಉಪಸ್ಥಿತರಿದ್ದರು.
ರಾಕೇಶ್ ಕೆ.ಪಿ. ಮಾಣಿಲ ನಿರೂಪಿಸಿದರು. ದೇವದಾಸ ಮಂಜೇಶ್ವರ ವಂದಿಸಿದರು. ರೇಖಾ ಎಸ್. ಕಾಮತ್ ಕುಟುಂಬದವರು ಗುರುದಕ್ಷಿಣೆ ಸಮರ್ಪಿಸಿದರು. ಶ್ರೀಗಳ ನೇತೃತ್ವದಲ್ಲಿ ಗಣಪತಿ ಹವನ, ಶ್ರೀ ಗುರುಪೂಜೆ ಶ್ರೀ ನಾಗದೇವರ ಪೂಜೆ , ಗೋಮಾತಾ ಪೂಜೆ, ಬಾಲಭೋಜನ, ಯಜ್ಞಯಾಗಾದಿಗಳು , ನವಗ್ರಹ ಶಾಂತಿ, ಸಾಮೂಹಿಕ ಕುಂಕುಮಾರ್ಚನೆ , ವಿಷ್ಣು ಸಹಸ್ರನಾಮ, ದುರ್ಗಾಪೂಜೆ , ಆಶ್ಲೇಷ ಬಲಿ, ಮಹಾಪೂಜೆ ,ಅನ್ನಸಂತರ್ಪಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು