8:27 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ

14/08/2024, 20:23

ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂತರವಾಗಿ ನಡೆಯಬೇಕು. ಹೊಟ್ಟೆಯ ಹಸಿವಿನ ಜೊತೆಗೆ ಅಧ್ಯಾತ್ಮದ ಹಸಿವು ಹೆಚ್ಚಾಗಬೇಕು. ಸಹಕಾರ , ಉಪಕಾರ ಸ್ಮರಣೆ, ಅನುಭೂತಿ ಪ್ರತಿಯೊಬ್ಬನಲ್ಲಿಯೂ ಇರಬೇಕು ಎಂದು ಮಾಣಿಲ ಶ್ರೀಧಾಮ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ದುರ್ಗಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ಸಮಾರೋಪದ ಅಂಗವಾಗಿ 48 ದಿನಗಳ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ, ಬಾಲಭೋಜನ ಕಾಯಕ್ರಮದಲ್ಲಿ ಆಶೀರ್ವಚನ ನೀಡಿದರು.


ದ.ಕ. ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಶಿಕ್ಷಕ ಯತಿರಾಜ , ಮುಳಿಯ ದಂಬೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ ಆನಂದ ಶೆಟ್ಟಿ, ಸೋಮೇಶ್ವರ ಪರಿಜ್ಞಾನ ಕಾಲೇಜು ಉಪನ್ಯಾಸಕಿ ಸುಶ್ಮಾ ರಾಕೇಶ್ ಮಂಗಳೂರು, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಪ್ರತಿಷ್ಠಾನದ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಅಧ್ಯಕ್ಷೆ ವನಿತಾ ವಿ. ಶೆಟ್ಟಿ , ಶ್ರೀಧಾಮ ಮಿತ್ರಮಂಡಳಿಯ ಕಾರ್ಯದರ್ಶಿ ಜಗನ್ನಾಥ ಉಪಸ್ಥಿತರಿದ್ದರು.
ರಾಕೇಶ್ ಕೆ.ಪಿ. ಮಾಣಿಲ ನಿರೂಪಿಸಿದರು. ದೇವದಾಸ ಮಂಜೇಶ್ವರ ವಂದಿಸಿದರು. ರೇಖಾ ಎಸ್. ಕಾಮತ್ ಕುಟುಂಬದವರು ಗುರುದಕ್ಷಿಣೆ ಸಮರ್ಪಿಸಿದರು. ಶ್ರೀಗಳ ನೇತೃತ್ವದಲ್ಲಿ ಗಣಪತಿ ಹವನ, ಶ್ರೀ ಗುರುಪೂಜೆ ಶ್ರೀ ನಾಗದೇವರ ಪೂಜೆ , ಗೋಮಾತಾ ಪೂಜೆ, ಬಾಲಭೋಜನ, ಯಜ್ಞಯಾಗಾದಿಗಳು , ನವಗ್ರಹ ಶಾಂತಿ, ಸಾಮೂಹಿಕ ಕುಂಕುಮಾರ್ಚನೆ , ವಿಷ್ಣು ಸಹಸ್ರನಾಮ, ದುರ್ಗಾಪೂಜೆ , ಆಶ್ಲೇಷ ಬಲಿ, ಮಹಾಪೂಜೆ ,ಅನ್ನಸಂತರ್ಪಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು