4:10 PM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ತ್ಯಾಗ, ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು: ಮಾಣಿಲ ಸ್ವಾಮೀಜಿ

14/08/2024, 20:23

ಬಂಟ್ವಾಳ(reporterkarnataka.com): ವ್ರತಾಚರಣೆಗಳ ಮೂಲಕ ದೇವರ ಮೇಲಿನ ಭಕ್ತಿಯೊಂದಿಗೆ ಆಧ್ಯಾತ್ಮಿಕ ಚಿಂತನೆ ಬೆಳೆಯಬೇಕು. ಧಾರ್ಮಿಕ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನು ಪಾವನಗೊಳಿಸಬೇಕು. ತ್ಯಾಗ ಮತ್ತು ಸೇವೆಯಲ್ಲಿ ದೇವರನ್ನು ಕಾಣುವಂತಾಗಬೇಕು. ಎಲ್ಲರಿಗೂ ಒಳಿತನ್ನು ಮಾಡುವ ಕಾಯಕವು ನಿರಂತರವಾಗಿ ನಡೆಯಬೇಕು. ಹೊಟ್ಟೆಯ ಹಸಿವಿನ ಜೊತೆಗೆ ಅಧ್ಯಾತ್ಮದ ಹಸಿವು ಹೆಚ್ಚಾಗಬೇಕು. ಸಹಕಾರ , ಉಪಕಾರ ಸ್ಮರಣೆ, ಅನುಭೂತಿ ಪ್ರತಿಯೊಬ್ಬನಲ್ಲಿಯೂ ಇರಬೇಕು ಎಂದು ಮಾಣಿಲ ಶ್ರೀಧಾಮ ಶ್ರೀದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಶ್ರೀಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಮಾಣಿಲ ಶ್ರೀಧಾಮ ಶ್ರೀ ದುರ್ಗಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆಯ ಬೆಳ್ಳಿ ಮಹೋತ್ಸವದ ಸಮಾರೋಪದ ಅಂಗವಾಗಿ 48 ದಿನಗಳ ನಡೆಯುವ ಸಾಮೂಹಿಕ ಶ್ರೀ ಲಕ್ಷ್ಮೀಪೂಜೆ, ಬಾಲಭೋಜನ ಕಾಯಕ್ರಮದಲ್ಲಿ ಆಶೀರ್ವಚನ ನೀಡಿದರು.


ದ.ಕ. ಜಿಲ್ಲಾ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಜಯಾನಂದ ಪೆರಾಜೆ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅಳಿಕೆ ಶ್ರೀಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯ ಶಿಕ್ಷಕ ಯತಿರಾಜ , ಮುಳಿಯ ದಂಬೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದ ಅಧ್ಯಕ್ಷ ಆನಂದ ಶೆಟ್ಟಿ, ಸೋಮೇಶ್ವರ ಪರಿಜ್ಞಾನ ಕಾಲೇಜು ಉಪನ್ಯಾಸಕಿ ಸುಶ್ಮಾ ರಾಕೇಶ್ ಮಂಗಳೂರು, ಮಾಣಿಲ ಶ್ರೀ ಮಹಾಲಕ್ಷ್ಮೀ ಮಹಿಳಾ ಪ್ರತಿಷ್ಠಾನದ ಗೌರವಾಧ್ಯಕ್ಷೆ ರೇವತಿ ಪೆರ್ನೆ, ಅಧ್ಯಕ್ಷೆ ವನಿತಾ ವಿ. ಶೆಟ್ಟಿ , ಶ್ರೀಧಾಮ ಮಿತ್ರಮಂಡಳಿಯ ಕಾರ್ಯದರ್ಶಿ ಜಗನ್ನಾಥ ಉಪಸ್ಥಿತರಿದ್ದರು.
ರಾಕೇಶ್ ಕೆ.ಪಿ. ಮಾಣಿಲ ನಿರೂಪಿಸಿದರು. ದೇವದಾಸ ಮಂಜೇಶ್ವರ ವಂದಿಸಿದರು. ರೇಖಾ ಎಸ್. ಕಾಮತ್ ಕುಟುಂಬದವರು ಗುರುದಕ್ಷಿಣೆ ಸಮರ್ಪಿಸಿದರು. ಶ್ರೀಗಳ ನೇತೃತ್ವದಲ್ಲಿ ಗಣಪತಿ ಹವನ, ಶ್ರೀ ಗುರುಪೂಜೆ ಶ್ರೀ ನಾಗದೇವರ ಪೂಜೆ , ಗೋಮಾತಾ ಪೂಜೆ, ಬಾಲಭೋಜನ, ಯಜ್ಞಯಾಗಾದಿಗಳು , ನವಗ್ರಹ ಶಾಂತಿ, ಸಾಮೂಹಿಕ ಕುಂಕುಮಾರ್ಚನೆ , ವಿಷ್ಣು ಸಹಸ್ರನಾಮ, ದುರ್ಗಾಪೂಜೆ , ಆಶ್ಲೇಷ ಬಲಿ, ಮಹಾಪೂಜೆ ,ಅನ್ನಸಂತರ್ಪಣೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು