12:05 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್  ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ

07/09/2021, 15:57

ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ‌.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾದದ್ದು, ಭರತ ಭೂಮಿಯಲ್ಲಿ ಗುರುವಿಗೆ ವಿಶೇಷವಾದ ಗೌರವವಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಸುಸಂಸ್ಕೃತ ವ್ಯಕ್ತಿಯ ಜೀವನ ಹಿರಿಮೆ ಮತ್ತು ಗುರುಕುಲ ಪದ್ಧತಿ ಮೂಲಕ ಗುರು ಪರಂಪರೆ ಬೆಳೆದು ಬಂದ ಹಿನ್ನೆಲೆ ಈ ನೆಲದಲ್ಲಿದೆ ಗುರುಗಳ ಶ್ರಮ ವರ್ಣಿಸಲು ಸಾಧ್ಯವಾಗದ್ದು  ಎಂದು ಹೇಳಿದರು. 

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ವಿಶ್ವಕ್ಕೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣ ದಲ್ಲಿ ಗುರುಗಳು ಪಾತ್ರ ಬಹುಮುಖ್ಯವಾಗಿದೆ ಎಂದರು. ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ  ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಗಿ, ಮುಖ್ಯ ಶಿಕ್ಷಕಿ ಅಮಿತಾ, ಸಂದೇಶ್ ಕುಮಾರ್ ಶೆಟ್ಟಿ, ರಂಜಿತಾ, ವೀಣಾ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು