8:04 AM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್  ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ

07/09/2021, 15:57

ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ‌.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾದದ್ದು, ಭರತ ಭೂಮಿಯಲ್ಲಿ ಗುರುವಿಗೆ ವಿಶೇಷವಾದ ಗೌರವವಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಸುಸಂಸ್ಕೃತ ವ್ಯಕ್ತಿಯ ಜೀವನ ಹಿರಿಮೆ ಮತ್ತು ಗುರುಕುಲ ಪದ್ಧತಿ ಮೂಲಕ ಗುರು ಪರಂಪರೆ ಬೆಳೆದು ಬಂದ ಹಿನ್ನೆಲೆ ಈ ನೆಲದಲ್ಲಿದೆ ಗುರುಗಳ ಶ್ರಮ ವರ್ಣಿಸಲು ಸಾಧ್ಯವಾಗದ್ದು  ಎಂದು ಹೇಳಿದರು. 

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ವಿಶ್ವಕ್ಕೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣ ದಲ್ಲಿ ಗುರುಗಳು ಪಾತ್ರ ಬಹುಮುಖ್ಯವಾಗಿದೆ ಎಂದರು. ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ  ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಗಿ, ಮುಖ್ಯ ಶಿಕ್ಷಕಿ ಅಮಿತಾ, ಸಂದೇಶ್ ಕುಮಾರ್ ಶೆಟ್ಟಿ, ರಂಜಿತಾ, ವೀಣಾ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು