10:59 PM Monday25 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್  ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ

07/09/2021, 15:57

ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ‌.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾದದ್ದು, ಭರತ ಭೂಮಿಯಲ್ಲಿ ಗುರುವಿಗೆ ವಿಶೇಷವಾದ ಗೌರವವಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಸುಸಂಸ್ಕೃತ ವ್ಯಕ್ತಿಯ ಜೀವನ ಹಿರಿಮೆ ಮತ್ತು ಗುರುಕುಲ ಪದ್ಧತಿ ಮೂಲಕ ಗುರು ಪರಂಪರೆ ಬೆಳೆದು ಬಂದ ಹಿನ್ನೆಲೆ ಈ ನೆಲದಲ್ಲಿದೆ ಗುರುಗಳ ಶ್ರಮ ವರ್ಣಿಸಲು ಸಾಧ್ಯವಾಗದ್ದು  ಎಂದು ಹೇಳಿದರು. 

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ವಿಶ್ವಕ್ಕೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣ ದಲ್ಲಿ ಗುರುಗಳು ಪಾತ್ರ ಬಹುಮುಖ್ಯವಾಗಿದೆ ಎಂದರು. ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ  ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಗಿ, ಮುಖ್ಯ ಶಿಕ್ಷಕಿ ಅಮಿತಾ, ಸಂದೇಶ್ ಕುಮಾರ್ ಶೆಟ್ಟಿ, ರಂಜಿತಾ, ವೀಣಾ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು