2:59 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್  ವತಿಯಿಂದ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆ

07/09/2021, 15:57

ಬೈಂದೂರು (reporterkarnataka.com): ನಗರದ ಯು.ಬಿ.ಶೆಟ್ಟಿ ಪ್ರವರ್ತಿತ ಟ್ರಸ್ಟ್ ನ ವತಿಯಿಂದ ಯು.ಬಿ.ಶೆಟ್ಟಿ ಸಮೂಹ ಶಿಕ್ಷಣ ಸಂಸ್ಥೆ ಬೈಂದೂರು ಹಾಗೂ ಉಪ್ಪುಂದದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಮಾತನಾಡಿದ ಯು.ಬಿ‌.ಶೆಟ್ಟಿ, ಶಿಕ್ಷಕರ ಪಾತ್ರ ಮಹತ್ವವಾದದ್ದು, ಭರತ ಭೂಮಿಯಲ್ಲಿ ಗುರುವಿಗೆ ವಿಶೇಷವಾದ ಗೌರವವಿದೆ. ಭವಿಷ್ಯವನ್ನು ರೂಪಿಸುವ ಸಾಮರ್ಥ್ಯ ಸುಸಂಸ್ಕೃತ ವ್ಯಕ್ತಿಯ ಜೀವನ ಹಿರಿಮೆ ಮತ್ತು ಗುರುಕುಲ ಪದ್ಧತಿ ಮೂಲಕ ಗುರು ಪರಂಪರೆ ಬೆಳೆದು ಬಂದ ಹಿನ್ನೆಲೆ ಈ ನೆಲದಲ್ಲಿದೆ ಗುರುಗಳ ಶ್ರಮ ವರ್ಣಿಸಲು ಸಾಧ್ಯವಾಗದ್ದು  ಎಂದು ಹೇಳಿದರು. 

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯಶಶ್ರೀ ಶೆಟ್ಟಿ ಮಾತನಾಡಿ, ರಾಧಾಕೃಷ್ಣನ್ ಅವರ ಆದರ್ಶ ವಿಶ್ವಕ್ಕೆ ಶ್ರೇಯಸ್ಸು ನೀಡಿದೆ. ಸಂಸ್ಕಾರಯುತ ಜೀವನ ರೂಪಿಸಬೇಕಾದರೆ ಒಬ್ಬ ಯೋಗ್ಯ ಹಾಗೂ ಯಶಸ್ವಿ ಗುರು ಮುಖ್ಯ. ಸುಸಂಸ್ಕೃತ ಸಮಾಜದ ನಿರ್ಮಾಣ ದಲ್ಲಿ ಗುರುಗಳು ಪಾತ್ರ ಬಹುಮುಖ್ಯವಾಗಿದೆ ಎಂದರು. ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.


ಈ ಸಂದರ್ಭದಲ್ಲಿ  ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಗಿ, ಮುಖ್ಯ ಶಿಕ್ಷಕಿ ಅಮಿತಾ, ಸಂದೇಶ್ ಕುಮಾರ್ ಶೆಟ್ಟಿ, ರಂಜಿತಾ, ವೀಣಾ, ಆಶಾ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು