6:51 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ವಿಧಾನಸಭಾ ಸ್ವೀಕರ್ ಗಳ ರಾಷ್ಟ್ರೀಯ ಸಮಿತಿಗೆ ಯು.ಟಿ.ಖಾದರ್ ನೇಮಕ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಂದ ನಾಮ ನಿರ್ದೇಶನ

14/05/2025, 23:30

ನವದೆಹಲಿ(reporterkarnataka.com): ಸಂವಿಧಾನದ ಹತ್ತನೇ ಅನುಸೂಚಿಯಡಿಯಲ್ಲಿ ಸಭಾಧ್ಯಕ್ಷರ ಅಧಿಕಾರಗಳನ್ನು ಮತ್ತು ನಿಯಮಗಳನ್ನು ಪರಿಶೀಲಿಸುವ ರಾಷ್ಟ್ರೀಯ ಸಮಿತಿಗೆ ಕರ್ನಾಟಕ ವಿಧಾನಸಭಾಧ್ಯಕ್ಷ ಹಾಗೂ ಮಂಗಳೂರು ಶಾಸಕರಾದ ಯು.ಟಿ.ಖಾದರ್ ಅವರನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ವಿಶೇಷ ಅಂದರೆ ಈ ರಾಷ್ಟ್ರೀಯ ಸಮಿತಿಯಲ್ಲಿ ವಿವಿಧ ರಾಜ್ಯಗಳ ಕೇವಲ 4 ಮಂದಿ ಮಾತ್ರ ಸ್ಪೀಕರ್ ಗಳಿದ್ದು, ಕರ್ನಾಟಕ ಮತ್ತು ಅದರಲ್ಲೂ ಮಂಗಳೂರು (ಉಳ್ಳಾಲ) ಕ್ಷೇತ್ರದ ಜನತೆಗೆ ಇದೊಂದು ಹೆಮ್ಮೆ ಮತ್ತು ಸಂತೋಷದ ಸುದ್ದಿಯಾಗಿದೆ.
ಮಹಾರಾಷ್ಟ್ರ ಸ್ಪೀಕರ್ ರಾಹುಲ್ ನಾರ್ವೇಕರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಒಡಿಶಾ ಸ್ಪೀಕರ್ ಸುರಮ ಪಾದಿ, ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಫರೀದ್, ನಾಗಲ್ಯಾಂಡ್ ಸ್ಪೀಕರ್ ಷರಿಂಗೈನ್ ಲಾಂಗ್ ಕುಮೆರ್ ಸೇರಿದಂತೆ ಈ ಮೂವರು ರಾಷ್ಟ್ರೀಯ ಸಮಿತಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆಗೆ ಚುರುಕು ಮುಟ್ಟಿಸಿ ಅಮೂಲಾಗ್ರ ಬದಲಾವಣೆ ತಂದಿರುವ ಯು.ಟಿ.ಖಾದರ್ ಅವರಿಗೆ ಈ ಸ್ಥಾನ ಅರ್ಹವಾಗಿಯೇ ಸಂದಿವೆ.

ಇತ್ತೀಚಿನ ಸುದ್ದಿ

ಜಾಹೀರಾತು