2:12 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಉದ್ದೀಪನ ಔಷಧ ಸೇವನೆ ಆರೋಪ: ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

20/09/2022, 15:29

ಹೊಸದಿಲ್ಲಿ(Reporterkarnataka.com):ಉದ್ದೀಪನ ಮದ್ದು ಸೇವನೆ ಹಿನ್ನೆಲೆಯ ಆರೋಪದ ಹಿನ್ನೆಲೆಯಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತೆ, ಹಿರಿಯ ಅಥ್ಲೇಟ್ ಎಂ. ಆರ್. ಪೂವಮ್ಮ ಅವರಿಗೆ 2 ವರ್ಷ ನಿಷೇಧ ಹೇರಲಾಗಿದೆ.

ಪಟಿಯಾಲದಲ್ಲಿ ಕಳೆದ ವರ್ಷ ಫೆಬ್ರವರಿ 18ರಂದು ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಸಮಯದಲ್ಲಿ ಪೂವಮ್ಮ ಅವರ ಡೋಪ್ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ ರದ್ದು ಮಾಡಿದ್ದ ಉತ್ತೇಜಕ ಮೀಥೈಲ್‌ ಹೆಕ್ಸಾನಿಯಮೈನ್‌  ತೆಗೆದುಕೊಂಡಿದ್ದು ಪಾಸಿಟಿವ್ ಬಂದ ಹಿನ್ನೆಲೆ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಎಪಿ 3 ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು . ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ತಿಳಿಸಿದ್ದಾರೆ.

ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (NADA) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು