8:23 PM Saturday23 - August 2025
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಕರಡಿಗೋಡು ವಂದನಾಪುರ ಎಸ್ಟೇಟ್ ಮನೆ ಆವರಣದಲ್ಲಿ ಕಾಡಾನೆಗಳ ದಾoಧಲೆ ಡಿಸ್ಕಸ್ ಥ್ರೋ ವೇಳೆ ಅವಘಡ: ವಿದ್ಯಾರ್ಥಿ ಗಂಭೀರ: ಮಂಗಳೂರು ಆಸ್ಪತ್ರೆಗೆ ದಾಖಲು ಬ್ರ್ಯಾಂಡ್ ಕರಾವಳಿ ಹೆಸರಲ್ಲಿ ಅಭಿವೃದ್ಧಿಗೆ ಒತ್ತು ನೀಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ನೇಹಿತನ ಆಟೋ ತರಲು ಹೋಗಿದ್ದ ಚಾಲಕ ಅಪಘಾತದಲ್ಲಿ ದುರ್ಮರಣ: ಕಾರು ಡಿಕ್ಕಿ ಹೊಡೆದು… ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ನಾಪತ್ತೆ ಪ್ರಕರಣ: ಸುಜಾತ ಭಟ್ ದೂರು ಎಸ್ಐಟಿಗೆ… ಕುಶಾಲನಗರ: ರಾಷ್ಟ್ರ ರಕ್ಷಣಾ ಪಡೆ ಸಂಸ್ಥಾಪಕ ಪುನೀತ್ ಕೆರೇಹಳ್ಳಿ ಪೊಲೀಸ್ ವಶಕ್ಕೆ ದಲಿತ ಸಿಎಂ ಕೂಗು ತಪ್ಪಿಸಲು ಒಳ ಮೀಸಲಾತಿ ಜಾರಿ: ದಿಲ್ಲಿಯಲ್ಲಿ ಮಾಜಿ ಸಿಎಂ… ತೋಟದಲ್ಲಿ ಬಿದ್ದಿದ್ದ ತೆಂಗಿನಕಾಯಿ ಹೆಕ್ಕಿದ್ದಕ್ಕೆ ಮಾಲೀಕನಿಂದ ಅಮಾನುಷ ಹಲ್ಲೆ: ಯುವಕ ಸಾವು ಧರ್ಮಸ್ಥಳ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಬೇಕು: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಟ್ಟು ಗುಳ್ಳ ನಂಟು ಉಡುಪಿ ಮಠಕ್ಕೂ ಉಂಟು: ವಾದಿರಾಜ ತೀರ್ಥರು ಬದನೆಗೆ ಹೆಸರಿಟ್ಟರಂತೆ!

ಇತ್ತೀಚಿನ ಸುದ್ದಿ

ಉದ್ದೀಪನ ಔಷಧ ಸೇವನೆ ಆರೋಪ: ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

20/09/2022, 15:29

ಹೊಸದಿಲ್ಲಿ(Reporterkarnataka.com):ಉದ್ದೀಪನ ಮದ್ದು ಸೇವನೆ ಹಿನ್ನೆಲೆಯ ಆರೋಪದ ಹಿನ್ನೆಲೆಯಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತೆ, ಹಿರಿಯ ಅಥ್ಲೇಟ್ ಎಂ. ಆರ್. ಪೂವಮ್ಮ ಅವರಿಗೆ 2 ವರ್ಷ ನಿಷೇಧ ಹೇರಲಾಗಿದೆ.

ಪಟಿಯಾಲದಲ್ಲಿ ಕಳೆದ ವರ್ಷ ಫೆಬ್ರವರಿ 18ರಂದು ನಡೆದ ಇಂಡಿಯನ್ ಗ್ರ್ಯಾಂಡ್ ಪ್ರಿಕ್ಸ್ ಸಮಯದಲ್ಲಿ ಪೂವಮ್ಮ ಅವರ ಡೋಪ್ ಮಾದರಿಯನ್ನು ಸಂಗ್ರಹಿಸಲಾಗಿದ್ದು, ವಿಶ್ವ ಡೋಪಿಂಗ್ ವಿರೋಧಿ ಸಂಸ್ಥೆ ರದ್ದು ಮಾಡಿದ್ದ ಉತ್ತೇಜಕ ಮೀಥೈಲ್‌ ಹೆಕ್ಸಾನಿಯಮೈನ್‌  ತೆಗೆದುಕೊಂಡಿದ್ದು ಪಾಸಿಟಿವ್ ಬಂದ ಹಿನ್ನೆಲೆ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಎಪಿ 3 ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು . ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ತಿಳಿಸಿದ್ದಾರೆ.

ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (NADA) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು