7:41 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು

04/05/2026, 22:00

ತಿರುವನಂತಪುರಂ(reporterkarnataka.com): ಇನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೇವಲ 35 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದು, 10 ವರ್ಷದ ಆಡಳಿತಕ್ಕೆ ಮತದಾರ ಬ್ರೇಕ್ ಹಾಕಿದ್ದಾರೆ.

*ಯಾರಾಗ್ತಾರೆ ಸಿಎಂ?*
ಇತ್ತ ಕಾಂಗ್ರೆಸ್- ಯುಡಿಎಫ್ ಮೈತ್ರಿಯು ಸರ್ಕಾರ ರಚಿಸುವುದು ಬಹುತೇಕ ಖಚಿವಾಗಿದ್ದು, ಈಗ ರಾಜ್ಯದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಮಿಲಿಯನ್ ಡಾಲರ್ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಕಳೆದು ಹತ್ತು ವರ್ಷದಿಂದ ಪಿಣರಾಯಿ ಆಡಳಿತವನ್ನು ನೋಡಿ-ನೋಡಿ ಸಾಕಾಗಿರುವ ಪಕ್ಷದ ಹಿರಿಯ ನಾಯಕರು ಈ ಭಾರಿ ಸಿಎಂ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಸುವ ಸಾಧ್ಯತೆಯಿದೆ.
ರೇಸ್‌ನಲ್ಲಿರುವವರು ಇವರೇ ನೋಡಿ!

*ರಮೇಶ್ ಚೆನ್ನಿತ್ತಲ:*
ಹಿರಿಯ ನಾಯಕ ಪಿ.ಜೆ. ಕುರಿಯನ್ ಅವರು ರಮೇಶ್ ಚೆನ್ನಿತ್ತಲ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಬಹಿರಂಗವಾಗಿ ಘೋಷಿಸುವ ಮೂಲಕ ಚರ್ಚೆಗೆ ನಾಂದಿ ಹಾಡಿದರು. ಚೆನ್ನಿತ್ತಲ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಮತ್ತು ಗಾಂಧಿ ಕುಟುಂಬದೊಂದಿಗೆ ಸಮಾಲೋಚನೆ ನಡೆಸಿದ್ದು ಕುತೂಹಲ ಮೂಡಿಸಿದೆ. ಆದಾಗ್ಯೂ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಚೆನ್ನಿತ್ತಲ ಸ್ಪಷ್ಟಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿ ಸತೀಶನ್ ಕಾರ್ಯವೈಖರಿಯೇ ಯುಡಿಎಫ್ ಗೆಲುವಿಗೆ ಕಾರಣವಾಗಿದೆ ಎನ್ನುವುದು ಪಕ್ಷದ ಕಾರ್ಯಕರ್ತರ ಮಾತಾಗಿದೆ. ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಶಿಯಾಸ್ ಸತೀಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ನಡೆಸಿದ ಅಭಿಯಾನವು ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

*ಕೆ.ಸಿ. ವೇಣುಗೋಪಾಲ್:*
ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ. ಸುಧಾಕರನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿರುವುದು ಕಣವನ್ನು ಮತ್ತಷ್ಟು ರಂಗೇರಿಸಿದೆ. ವೇಣುಗೋಪಾಲ್ ನಾಯಕತ್ವವನ್ನು ಉಮ್ಮನ್ ಚಾಂಡಿ ಮತ್ತು ಎ.ಕೆ. ಆಂಟನಿಯಂತಹ ದೈತ್ಯ ನಾಯಕರಿಗೆ ಹೋಲಿಸಲಾಗುತ್ತಿದೆ. ಆದರೆ ಈ ಭಾರಿ ವಿಧಾನಸಭಾ ಚುನಾವಣೆಗೆ ವೇಣುಗೋಪಾಲ್ ಸ್ಪರ್ಧಿಸಿರದ ಕಾರಣ ಇವರ ಆಯ್ಕೆ ಬಹುತೇಕ ಕಠಿಣವೆಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು