3:54 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು

04/05/2026, 22:00

ತಿರುವನಂತಪುರಂ(reporterkarnataka.com): ಇನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಎಲ್ಡಿಎಫ್ ಕೇವಲ 35 ಕ್ಷೇತ್ರಗಳಲ್ಲಿ ಮುನ್ನಡೆ ಹೊಂದಿದ್ದು, 10 ವರ್ಷದ ಆಡಳಿತಕ್ಕೆ ಮತದಾರ ಬ್ರೇಕ್ ಹಾಕಿದ್ದಾರೆ.

*ಯಾರಾಗ್ತಾರೆ ಸಿಎಂ?*
ಇತ್ತ ಕಾಂಗ್ರೆಸ್- ಯುಡಿಎಫ್ ಮೈತ್ರಿಯು ಸರ್ಕಾರ ರಚಿಸುವುದು ಬಹುತೇಕ ಖಚಿವಾಗಿದ್ದು, ಈಗ ರಾಜ್ಯದ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಮಿಲಿಯನ್ ಡಾಲರ್ ಪ್ರಶ್ನೆ ಎಲ್ಲರಲ್ಲಿ ಮೂಡಿದೆ. ಕಳೆದು ಹತ್ತು ವರ್ಷದಿಂದ ಪಿಣರಾಯಿ ಆಡಳಿತವನ್ನು ನೋಡಿ-ನೋಡಿ ಸಾಕಾಗಿರುವ ಪಕ್ಷದ ಹಿರಿಯ ನಾಯಕರು ಈ ಭಾರಿ ಸಿಎಂ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಸುವ ಸಾಧ್ಯತೆಯಿದೆ.
ರೇಸ್‌ನಲ್ಲಿರುವವರು ಇವರೇ ನೋಡಿ!

*ರಮೇಶ್ ಚೆನ್ನಿತ್ತಲ:*
ಹಿರಿಯ ನಾಯಕ ಪಿ.ಜೆ. ಕುರಿಯನ್ ಅವರು ರಮೇಶ್ ಚೆನ್ನಿತ್ತಲ ಅವರೇ ಮುಂದಿನ ಮುಖ್ಯಮಂತ್ರಿ ಎಂದು ಬಹಿರಂಗವಾಗಿ ಘೋಷಿಸುವ ಮೂಲಕ ಚರ್ಚೆಗೆ ನಾಂದಿ ಹಾಡಿದರು. ಚೆನ್ನಿತ್ತಲ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಮಲ್ಲಿಕಾರ್ಜುನ ಖರ್ಗೆ ಮತ್ತು ಗಾಂಧಿ ಕುಟುಂಬದೊಂದಿಗೆ ಸಮಾಲೋಚನೆ ನಡೆಸಿದ್ದು ಕುತೂಹಲ ಮೂಡಿಸಿದೆ. ಆದಾಗ್ಯೂ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಚೆನ್ನಿತ್ತಲ ಸ್ಪಷ್ಟಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕರಾಗಿ ಸತೀಶನ್ ಕಾರ್ಯವೈಖರಿಯೇ ಯುಡಿಎಫ್ ಗೆಲುವಿಗೆ ಕಾರಣವಾಗಿದೆ ಎನ್ನುವುದು ಪಕ್ಷದ ಕಾರ್ಯಕರ್ತರ ಮಾತಾಗಿದೆ. ಎರ್ನಾಕುಲಂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಶಿಯಾಸ್ ಸತೀಶನ್ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ನಡೆಸಿದ ಅಭಿಯಾನವು ಹಿರಿಯ ನಾಯಕರ ಕೆಂಗಣ್ಣಿಗೆ ಗುರಿಯಾಗಿತ್ತು.

*ಕೆ.ಸಿ. ವೇಣುಗೋಪಾಲ್:*
ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ. ಸುಧಾಕರನ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಬೆಂಬಲಿಸಿರುವುದು ಕಣವನ್ನು ಮತ್ತಷ್ಟು ರಂಗೇರಿಸಿದೆ. ವೇಣುಗೋಪಾಲ್ ನಾಯಕತ್ವವನ್ನು ಉಮ್ಮನ್ ಚಾಂಡಿ ಮತ್ತು ಎ.ಕೆ. ಆಂಟನಿಯಂತಹ ದೈತ್ಯ ನಾಯಕರಿಗೆ ಹೋಲಿಸಲಾಗುತ್ತಿದೆ. ಆದರೆ ಈ ಭಾರಿ ವಿಧಾನಸಭಾ ಚುನಾವಣೆಗೆ ವೇಣುಗೋಪಾಲ್ ಸ್ಪರ್ಧಿಸಿರದ ಕಾರಣ ಇವರ ಆಯ್ಕೆ ಬಹುತೇಕ ಕಠಿಣವೆಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು