7:34 PM Monday4 - May 2026
ಬ್ರೇಕಿಂಗ್ ನ್ಯೂಸ್
ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,…

ಇತ್ತೀಚಿನ ಸುದ್ದಿ

ಕೇರಳದಲ್ಲಿ ಯುಡಿಎಫ್​​ ಕಮಾಲ್​: ಅಧಿಕಾರದಲ್ಲಿದ್ದ ಒಂದೇ ಒಂದು ರಾಜ್ಯವನ್ನೂ ಕಳೆದುಕೊಂಡ ಕಮ್ಯುನಿಸ್ಟ್

04/05/2026, 18:30

ತಿರುವನಂತಪುರಂ(reporterkarnataka.com):ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಭರ್ಜರಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಇದಾಗಿದ್ದು, ಆಡಳಿತಾರೂಢ ಕಮ್ಯುನಿಷ್ಟ್ ನೇತೃತ್ವದ ಎಲ್‌ಡಿಎಫ್ ಭಾರೀ ಹಿನ್ನಡೆ ಅನುಭವಿಸಿದೆ. ಈ ಮೂಲಕ ದೇಶದಲ್ಲಿ ಅಧಿಕಾರದಲ್ಲಿದ್ದ ಏಕೈಕ ಕಮ್ಯುನಿಸ್ಟ್ ಸರ್ಕಾರ ಅಧಿಕಾರ ಕಳೆದುಕೊಳ್ಳುವತ್ತ ಸಾಗಿದೆ. ಯುಡಿಎಫ್​ಗೆ 10 ವರ್ಷಗಳ ನಂತರ ಅಧಿಕಾರಕ್ಕೆ ಮರಳುವ ಅವಕಾಶ ಸಿಕ್ಕಿದೆ.
140 ಸದಸ್ಯರ ಬಲವನ್ನು ಹೊಂದಿರುವ ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಇದನ್ನು ಕಳೆದ ಎರಡು ದಶಕಗಳಲ್ಲಿನ ಅತ್ಯುತ್ತಮ ಪ್ರದರ್ಶನ ಎಂದೇ ಪರಿಗಣಿಸಲಾಗಿದೆ. ಆ ಮೂಲಕ ದೇಶದಲ್ಲಿ ಈವರೆಗೆ ಆಡಳಿತದಲ್ಲಿದ್ದ ಏಕೈಕ ಕಮ್ಯುನಿಷ್ಟ್​​ ಸರ್ಕಾರವೂ ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
2001ರ ವಿಧಾನಸಭಾ ಚುನಾವಣೆಯ ನಂತರದ ಯುಡಿಎಫ್​​ನ ಅತ್ಯುತ್ತಮ ಫಲಿತಾಂಶ ಇದಾಗಲಿದೆ. ಅಂದು ಯುಡಿಎಫ್ 99 ಸ್ಥಾನಗಳನ್ನು ಗೆದ್ದು ಇತಿಹಾಸ ನಿರ್ಮಿಸಿತ್ತು. ಇದೀಗ ಸಿಪಿಐ(ಎಂ) ನೇತೃತ್ವದ ಆಡಳಿತದಲ್ಲಿರುವ ಎಲ್‌ಡಿಎಫ್ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್) ಹಲವಾರು ಪ್ರಮುಖ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದ್ದು, ಭಾರೀ ಸೋಲಿನತ್ತ ಸಾಗಿರೋದನ್ನು ಅಂಕಿ ಅಂಶಗಳು ಹೇಳುತ್ತಿವೆ. ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ನೇತೃತ್ವದಲ್ಲಿ ನಡೆದ ಪ್ರಚಾರದಲ್ಲಿ ಕಾಂಗ್ರೆಸ್ 100 ಸ್ಥಾನಗಳ ಗುರಿ ಹೊಂದಿದ್ದು, 10 ವರ್ಷಗಳ ನಂತರ ಮತ್ತೆ ಅಧಿಕಾರಕ್ಕೆ ಬರುವ ದಿಸೆಯಲ್ಲಿ ಕೆಲಸ ಮಾಡಿತ್ತು. ಅದೀಗ ಫಲಕೊಟ್ಟಿರೋದು ಸ್ಪಷ್ಟವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಯುಡಿಎಫ್ ಉತ್ತಮ ಸಾಧನೆ ಮಾಡಿದ್ದು, ಎಲ್‌ಡಿಎಫ್‌ನ ಪರಂಪರೆಯ ಬಲಿಷ್ಠ ಕ್ಷೇತ್ರಗಳಲ್ಲೂ ಉತ್ತಮ ಮತಗಳನ್ನು ಪಡೆದಿದೆ ಎನ್ನುವುದು ಗಮನಾರ್ಹ.

ಇತ್ತೀಚಿನ ಸುದ್ದಿ

ಜಾಹೀರಾತು