2:37 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಉಡುಪಿ: ಅಗಲಿದ ಪತ್ರಕರ್ತರಾದ ಶೇಖರ್ ಅಜೆಕಾರ್, ಶಶಿಧರ್ ಹೆಮ್ಮಣ್ಣಗೆ ನುಡಿನಮನ

11/11/2023, 23:28

ಉಡುಪಿ(reporterkarnataka.com): ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತರಾದ ಶೇಖರ್ ಅಜೆಕಾರ್ ಹಾಗೂ ಶಶಿಧರ್ ಹೆಮ್ಮಣ್ಣ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ಶನಿವಾರ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಯಿತು.
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಬರಹದ ಹುಚ್ಚಿನ ದಾರಿಯ ಬದುಕು ಯಾವತ್ತೂ ಸುಲಭ ಅಲ್ಲ. ಬಹಳ ಸವಾಲು, ಸಂಕಷ್ಟ ಎದುರಿಸಿಯೇ ಮುಂದೆ ಹೆಜ್ಜೆ ಇಡಬೇಕಾಗುತ್ತದೆ. ಪತ್ರಕರ್ತರು ಸವಾಲುಗಳನ್ನು ಒಡ್ಡಿ ಸಮಾಜದ ಮುಂದೆ ತಮ್ಮನ್ನು ಗುರುತಿಸಿ ಕೊಳ್ಳುತ್ತಾರೆ. ಹಾಗಾಗಿ ಬರಹದ ಹುಚ್ಚಿನಿಂದ ಪತ್ರಕರ್ತ ವ್ಯಕ್ತಿಯಾಗಿ ಬೆಳೆಯ ಬಹುದೇ ಹೊರತು ಆರ್ಥಿಕವಾಗಿ ಬೆಳೆಯುವುದು ಕಷ್ಟ ಎಂದು ಹೇಳಿದರು.
ಶೇಖರ್ ಅಜೆಕಾರು ಸಾಮಾಜಿಕ ಬದುಕಿನಲ್ಲಿ ಆಳವಾದ ಅಧ್ಯಯನ ಮಾಡಿದ್ದಾರೆ. ಶಶಿಧರ್ ಹೆಮ್ಮಣ್ಣ ಅವರ ಬರವಣಿಗೆ ವಾಸ್ತವ್ಯ ಸ್ಥಿತಿಗೆ ಬಹಳಷ್ಟು ಹತ್ತಿರವಾಗಿರುತ್ತದೆ. ಇಬ್ಬರದ್ದು ಸಾಯುವ ವಯಸ್ಸು ಅಲ್ಲ. ಇನ್ನಷ್ಟು ವರ್ಷ ಬದುಕಲು ಬೇಕಾದ ಅವಕಾಶಗಳು ಇರುತ್ತಿತ್ತು. ಎಲ್ಲರ ಒಳಗೊಂಡ ಸಾಮಾಜ ಕಟ್ಟು ಅವರ ಕಲ್ಪನೆಗೆ ಇನ್ನಷ್ಟು ಶಕ್ತಿ ಬರುತ್ತಿತ್ತು ಎಂದರು.
ಉಡುಪಿ ರಂಗಭೂಮಿ ಉಪಾಧ್ಯಕ್ಷ ಭಾಸ್ಕರ ರಾವ್ ಕಿದಿಯೂರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಮಾಜಿ ಅಧ್ಯಕ್ಷ ಗೋಕುಲ್‌ದಾಸ್ ಪೈ, ಹಿರಿಯ ಉಪಸಂಪಾದಕ ಕರುಣಾಕರ್, ಪತ್ರಕರ್ತರಾದ ದೀಪಕ್ ಜೈನ್, ಶಶಿಧರ್ ಮಾಸ್ತಿಬೈಲು ನುಡಿನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಮಾಜಿ ಅಧ್ಯಕ್ಷ ಜಯಕರ ಸುವರ್ಣ, ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ, ಸಹ ಸಂಚಾಲಕ ಅಂಕಿತ್ ಶೆಟ್ಟಿ, ಉತ್ತರ ಕನ್ನಡ ಜಿಲ್ಲಾ ವಾರ್ತಾಧಿಕಾರಿ ಶಿವಕುಮಾರ್, ಕೆಮ್ಮಣ್ಣು, ಗ್ರಾಪಂ ಕಾರ್ಯದರ್ಶಿ ದಿನಕರ ಬೆಂಗ್ರೆ ಮೊದಲಾದವರು ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು