10:42 AM Monday6 - April 2026
ಬ್ರೇಕಿಂಗ್ ನ್ಯೂಸ್
Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ… ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ…

ಇತ್ತೀಚಿನ ಸುದ್ದಿ

ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು

21/09/2022, 21:57

ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ‌ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು 
ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ.

ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿರುವುದನ್ನು ಗಮನಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ಹಿರಿಯ ನಾಗರಿಕರ ಸಹಾಯವಾಣಿಯ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಿ, ಕುಟುಂಬದ ವಶಕ್ಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಾಜ ಸೇವಕ ವಿಶು ಶೆಟ್ಟಿ ಅಣ್ಣಪ್ಪಯ್ಯ ಅವರನ್ನು ಮೊದಲು ವಿಚಾರಿಸಿದಾಗ ಅಸ್ಪಷ್ಟ ಉತ್ತರ ನೀಡಿದ್ದರು. ಅನುಮಾನಗೊಂಡ ಅವರು ಕೂಡಲೇ ಉಡುಪಿಯ ಹಿರಿಯ ನಾಗರಿಕ ಸಹಾಯವಾಣಿಯ ಗಮನಕ್ಕೆ ತಂದರು. ಕೂಡಲೇ ಸ್ಪಂದಿಸಿದ ಸಹಾಯವಾಣಿಯ ಸಿಬ್ಬಂದಿಗಳು, ವ್ಯಕ್ತಿಯನ್ನು ವಿಶು ಶೆಟ್ಟಿ ಅವರ ವಾಹನದಲ್ಲಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.

ಆಶ್ರಮದ ಆರೈಕೆಯಿಂದ ಸಾಂತ್ವನಗೊಂಡ ಬಳಿಕ ಅಣ್ಣಪ್ಪಯ್ಯ ಅವರು ತಾವು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ನಡೆಸಲು ಮುಂದಾಗಿರುವ ವಿಷಯವನ್ನು ತಿಳಿಸಿದ್ದಾರೆ. ಕೊನೆಗೆ ಅವರಿಂದ ಮಗನ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡು ಮಾಹಿತಿ ನೀಡಿದಾಗ ತನ್ನ ತಂದೆ ಕಾಶಿಯಾತ್ರೆಗೆ ಹೋಗಿದ್ದಾರೆ ಎಂದು ಮಗ ಉತ್ತರಿಸಿದ್ದ.

ಆದರೆ ವಿಷಯದ ಗಂಭೀರತೆಯನ್ನು ಅರಿತ ಮಗ ಉಡುಪಿಗೆ ಬಂದು ತಂದೆಯನ್ನು ಊರಿಗೆ ಕರೆದುಕೊಂಡು ಹೋಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು