9:05 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಡುಪಿ: ಆತ್ಮಹತ್ಯೆಗೆ ಯತ್ನಿಸಿದ ಕೋಲಾರದ ನಿವಾಸಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದರು

21/09/2022, 21:57

ಉಡುಪಿ(reporterkarnataka.com) : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ‌ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ಸಾಮಾಜಿಕ ಕಾರ್ಯಕರ್ತರೊಬ್ಬರು 
ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ.

ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿರುವುದನ್ನು ಗಮನಿಸಿದ ಸಮಾಜ ಸೇವಕ ವಿಶು ಶೆಟ್ಟಿ ಅವರು ಹಿರಿಯ ನಾಗರಿಕರ ಸಹಾಯವಾಣಿಯ ಸಿಬ್ಬಂದಿಗಳ ಸಹಾಯದಿಂದ ರಕ್ಷಿಸಿ, ಕುಟುಂಬದ ವಶಕ್ಕೆ ನೀಡುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಾಜ ಸೇವಕ ವಿಶು ಶೆಟ್ಟಿ ಅಣ್ಣಪ್ಪಯ್ಯ ಅವರನ್ನು ಮೊದಲು ವಿಚಾರಿಸಿದಾಗ ಅಸ್ಪಷ್ಟ ಉತ್ತರ ನೀಡಿದ್ದರು. ಅನುಮಾನಗೊಂಡ ಅವರು ಕೂಡಲೇ ಉಡುಪಿಯ ಹಿರಿಯ ನಾಗರಿಕ ಸಹಾಯವಾಣಿಯ ಗಮನಕ್ಕೆ ತಂದರು. ಕೂಡಲೇ ಸ್ಪಂದಿಸಿದ ಸಹಾಯವಾಣಿಯ ಸಿಬ್ಬಂದಿಗಳು, ವ್ಯಕ್ತಿಯನ್ನು ವಿಶು ಶೆಟ್ಟಿ ಅವರ ವಾಹನದಲ್ಲಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದಾರೆ.

ಆಶ್ರಮದ ಆರೈಕೆಯಿಂದ ಸಾಂತ್ವನಗೊಂಡ ಬಳಿಕ ಅಣ್ಣಪ್ಪಯ್ಯ ಅವರು ತಾವು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ನಡೆಸಲು ಮುಂದಾಗಿರುವ ವಿಷಯವನ್ನು ತಿಳಿಸಿದ್ದಾರೆ. ಕೊನೆಗೆ ಅವರಿಂದ ಮಗನ ದೂರವಾಣಿ ಸಂಖ್ಯೆಯನ್ನು ಪಡೆದುಕೊಂಡು ಮಾಹಿತಿ ನೀಡಿದಾಗ ತನ್ನ ತಂದೆ ಕಾಶಿಯಾತ್ರೆಗೆ ಹೋಗಿದ್ದಾರೆ ಎಂದು ಮಗ ಉತ್ತರಿಸಿದ್ದ.

ಆದರೆ ವಿಷಯದ ಗಂಭೀರತೆಯನ್ನು ಅರಿತ ಮಗ ಉಡುಪಿಗೆ ಬಂದು ತಂದೆಯನ್ನು ಊರಿಗೆ ಕರೆದುಕೊಂಡು ಹೋಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು