12:36 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಡುಪಿ: ಬೀಗ ಮುರಿದು ಕಳ್ಳತನ; ಚಿನ್ನಾಭರಣ ಸಹಿತ ಒಟ್ಟು 3.70 ಲಕ್ಷ ರೂ. ಮೌಲ್ಯದ ಸೊತ್ತು ಕಳ್ಳರ ಪಾಲು

17/11/2021, 21:01

ಉಡುಪಿ(reporterkarnataka.com):  ಬಾಗಿಲಿನ ಬೀಗ ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು‌ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಗುಂಡಿಬೈಲು ದುಗ್ಗಣ್ಣಬೆಟ್ಟು ಮಾರ್ಗದ ಜುಮಾದಿಕಟ್ಟೆ ದೇವಸ್ಥಾನದ ಬಳಿ‌ ಬಾಬು ಆಚಾರ್ಯ ಎಂಬವರ ಮನೆಯಲ್ಲಿ‌ ನಡೆದಿದೆ.

ಮಂಗಳವಾರ ರಾತ್ರಿ 7ರಿಂದ ಬುಧವಾರ ಬೆಳಗ್ಗೆ 5.30ರ ಮಧ್ಯೆ ಯಾರೋ ಕಳ್ಳರು ಬಾಬು ಆಚಾರ್ಯರ ಮನೆಯ ಬಾಗಿಲು‌ ಮರಿದು ಒಳನುಗ್ಗಿದ್ದಾರೆ. ಬಳಿಕ ಕಪಾಟಿನಲ್ಲಿದ್ದ ಬೀಗದಿಂದ ಲಾಕರ್‌ತೆಗೆದು ಅದರಲ್ಲಿದ್ದ 12 ಗ್ರಾಂ ತೂಕದ ಚಿನ್ನದ ತೆಂಡುಲ್ಕರ್‌ಚೈನ್‌, 3 ಗ್ರಾಂ ತೂಕದ ಚಿನ್ನದ ಪವಿತ್ರ ಉಂಗುರ-1, 24 ಗ್ರಾಂ ತೂಕದ ಕಾಶಿತಾಳಿ ಸರ-1, 22 ಗ್ರಾಂ ತೂಕದ ಪೆಂಡೆಂಟ್‌ಇರುವ ಮುತ್ತಿನ ಸರ-1, 26 ಗ್ರಾಂ ತೂಕದ ಚಿನ್ನದ ಬಳೆಗಳು-2, 3 ಗ್ರಾಂ ತೂಕದ ಚಿನ್ನದ ಉಂಗುರ-1 ಸಹಿತ ಒಟ್ಟು 90 ಗ್ರಾಂ ತೂಕದ ₹ 3,60,000/- ಮೌಲ್ಯದ ಚಿನ್ನಾಭರಣಗಳನ್ನು ಕಳವು‌ ಮಾಡಿದ್ದಾರೆ.

ಅಲ್ಲದೆ, ಬೆಳ್ಳಿ ಹರಿವಾಣ-1, ಬೆಳ್ಳಿ ತೋಟ-1, ಬೆಳ್ಳಿ ಕವಳಿಕೆ ಸೌಟು-1 ಒಟ್ಟು ರೂ. 10,000 ಮೌಲ್ಯದ ಬೆಳ್ಳಿ ಸಾಮಾಗ್ರಿಗಳು ಜೊತೆಗೆ ದೇವರ ಡಬ್ಬದಲ್ಲಿದ್ದ ಅಂದಾಜು ರೂ. 400/- ಮತ್ತು ಪಿರ್ಯಾದುದಾರರ ಅಣ್ಣನ ಜಾಗದ ಮೂಲ ದಾಖಲೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಒಟ್ಟು ಮೌಲ್ಯ 3,70,400 ಮೌಲ್ಯದ ಸೊತ್ತುಗಳನ್ನು‌ ಕಳ್ಳರು ಕಳವು ಮಾಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು