3:02 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಉಡುಪಿ: ಇ-ಸ್ಯಾಂಡ್ ಆಪ್ ನಲ್ಲಿ ಮರಳು ಲಭ್ಯ; ಸ್ವರ್ಣಾ, ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವು

27/10/2021, 08:42

ಉಡುಪಿ(reporterkarnataka.com): ಉಡುಪಿ ಜಿಲ್ಲೆಯ ಬ್ರಹ್ಮಾವರ ಮತ್ತು ಉಡುಪಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿನ ಸ್ವರ್ಣಾ ಮತ್ತು ಸೀತಾ ನದಿ ಪಾತ್ರಗಳಲ್ಲಿ ಮರಳು ದಿಬ್ಬ ತೆರವುಗೊಳಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಮರಳನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ UDUPI E-SAND APP ನ ಮೂಲಕ ಪೂರೈಸಲು ತೀರ್ಮಾನಿಸಲಾಗಿರುತ್ತದೆ. 

ಅದರಂತೆ  ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿನ ಸಾರ್ವಜನಿಕರಿಗೆ/ ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಂಡಿದ್ದು, ಮರಳು ಅವಶ್ಯಕತೆ ಇರುವವರು UDUPI E-SAND APP ಮುಖಾಂತರ ಪಡೆಯಬಹುದಾಗಿದ್ದು,  ಯಾವುದೇ ಕಾರಣಕ್ಕೂ ಹೊರ ಜಿಲ್ಲೆಗೆ ಮರಳು ಪೂರೈಸಲು ಅವಕಾಶವಿರುವುದಿಲ್ಲ. 

ಹೆಚ್ಚಿನ ಮಾಹಿತಿಗಾಗಿ ಹಿರಿಯ ಭೂವಿಜ್ಞಾನಿಯವರ ಕಛೇರಿ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ: 0820-2572333,: 6366745888, 6364024555 Sand App Contact No: 6366745888, 6364024555 (App related queries) 6366871888 (Accounts related queries) ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಭೂವಿಜ್ಞಾನಿ/ ಅನುಷ್ಠಾನಾಧಿಕಾರಿ, ಜಿಲ್ಲಾ 07 ಸದಸ್ಯರ ಸಮಿತಿ ಉಡುಪಿ ಜಿಲ್ಲೆ ಅವರ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು