9:19 AM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಉಡುಪಿ: ಹೊಮ್ ನರ್ಸ್ ನಿಂದ ವೃದ್ಧೆಯ 1.45 ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳವು

26/11/2022, 17:33

ಉಡುಪಿ(reporterkarnataka.com): ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ.

ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಳ್ಳಲು ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ರೇಖಾ ಹೆಬ್ಬಳ್ಳಿ ಎಂಬಾಕೆಯನ್ನು ಹೋಂ ನರ್ಸ್ ಆಗಿ ನೇಮಿಸಿದ್ದರು.

ಅಕ್ಟೋಬರ್ 20 ರಿಂದ ರೇಖಾ ಹೆಬ್ಬಳ್ಳಿ, ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಂಡಿದ್ದರು. ನ.21 ರಂದು ಸಂಜೆ ವೇಳೆ ರೇಖಾ ಹೆಬ್ಬಳ್ಳಿ ಯಾರಿಗೂ ಹೇಳದೇ ಮನೆಯಿಂದ ಹೋಗಿದ್ದಳು. ಬಳಿಕ ವಸಂತ ಶೆಟ್ಟಿ ಅವರು ತಾಯಿಯ ಬಳಿ ಹೋಗಿ ನೋಡಿದಾಗ ಅವರ ಕುತ್ತಿಗೆಯಲ್ಲಿದ್ದ 1,45, ಲಕ್ಷ ರೂ. ಮೌಲ್ಯದ ಚಿನ್ನದ ಚೈನ್ ಕಂಡು ಬಂದಿಲ್ಲ. ಈ ಬಗ್ಗೆ ರೇಖಾಳಿಗೆ ಫೋನ್ ಮಾಡಿದಾಗ ಆಕೆಯು ಫೋನ್ ಸ್ವೀಕರಿಸುತ್ತಿರಲಿಲ್ಲ. ತಾಯಿ ಚೈನ್ ಅನ್ನು ರೇಖಾ ಅವರೇ ಕಳವು ಮಾಡಿಕೊಂಡು ಹೋಗಿರುವ ಸಂಶಯ ಇದೆ ಎಂದು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು