4:22 AM Sunday23 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಉಡುಪಿ: ಹೊಮ್ ನರ್ಸ್ ನಿಂದ ವೃದ್ಧೆಯ 1.45 ಲಕ್ಷ ರೂ ಮೌಲ್ಯದ ಚಿನ್ನದ ಸರ ಕಳವು

26/11/2022, 17:33

ಉಡುಪಿ(reporterkarnataka.com): ವಯೋವೃದ್ಧರೊಬ್ಬರ ನೋಡಿಕೊಳ್ಳಲು ನೇಮಿಸಿದ್ದ ಹೋಮ್ ನರ್ಸ್ ವೋರ್ವಳು, ವೃದ್ಧೆಯ ಕುತ್ತಿಗೆಯಲ್ಲಿದ್ದ 1.45 ಲಕ್ಷ ಮೌಲ್ಯದ ಚಿನ್ನದ ಸರ ಕಳವು ಮಾಡಿಕೊಂಡು ಪರಾರಿಯಾದ ಘಟನೆ ಉಡುಪಿ ತಾಲೂಕಿನ ಆತ್ರಾಡಿ ಗ್ರಾಮದ ಮದಗ ಎಂಬಲ್ಲಿ ನಡೆದಿದೆ.

ಮದಗದ ಚೆನ್ನಿಬೆಟ್ಟು ನಿವಾಸಿ ವಸಂತ ಶೆಟ್ಟಿ ಅವರು ತಮ್ಮ 98 ವರ್ಷದ ತಾಯಿ ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಳ್ಳಲು ಉಡುಪಿ ಉಷಾ ಮ್ಯಾರೇಜ್ ಬ್ಯುರೋ & ಜಾಬ್ ಲಿಂಕ್ಸ್ ಏಜೆನ್ಸಿ ಮುಖಾಂತರ ರೇಖಾ ಹೆಬ್ಬಳ್ಳಿ ಎಂಬಾಕೆಯನ್ನು ಹೋಂ ನರ್ಸ್ ಆಗಿ ನೇಮಿಸಿದ್ದರು.

ಅಕ್ಟೋಬರ್ 20 ರಿಂದ ರೇಖಾ ಹೆಬ್ಬಳ್ಳಿ, ಸರಸ್ವತಿ ಅವರ ಆರೈಕೆ ಮಾಡಿ ನೋಡಿಕೊಂಡಿದ್ದರು. ನ.21 ರಂದು ಸಂಜೆ ವೇಳೆ ರೇಖಾ ಹೆಬ್ಬಳ್ಳಿ ಯಾರಿಗೂ ಹೇಳದೇ ಮನೆಯಿಂದ ಹೋಗಿದ್ದಳು. ಬಳಿಕ ವಸಂತ ಶೆಟ್ಟಿ ಅವರು ತಾಯಿಯ ಬಳಿ ಹೋಗಿ ನೋಡಿದಾಗ ಅವರ ಕುತ್ತಿಗೆಯಲ್ಲಿದ್ದ 1,45, ಲಕ್ಷ ರೂ. ಮೌಲ್ಯದ ಚಿನ್ನದ ಚೈನ್ ಕಂಡು ಬಂದಿಲ್ಲ. ಈ ಬಗ್ಗೆ ರೇಖಾಳಿಗೆ ಫೋನ್ ಮಾಡಿದಾಗ ಆಕೆಯು ಫೋನ್ ಸ್ವೀಕರಿಸುತ್ತಿರಲಿಲ್ಲ. ತಾಯಿ ಚೈನ್ ಅನ್ನು ರೇಖಾ ಅವರೇ ಕಳವು ಮಾಡಿಕೊಂಡು ಹೋಗಿರುವ ಸಂಶಯ ಇದೆ ಎಂದು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು