3:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಉಡುಪಿ ಜುವೆಲ್ಲರಿಯಿಂದ 3 ಲಕ್ಷ ಮೌಲ್ಯದ ಚಿನ್ನದ ಬಳೆ ಕಳವು: ಗ್ರಾಹಕರ ಸೋಗಿನಲ್ಲಿ ಬಂದ ಆ ಮಹಿಳೆಯರು ಮಾಡಿದ್ದೇನು? 

25/11/2021, 18:06

ಉಡುಪಿ(reporterkarnataka.com): ಸೇಲ್ಸ್‌ ಮೆನ್‌ ನ ಗಮನ ಬೇರೆಡೆಗೆ ಸೆಳೆದು ಇಬ್ಬರು ಮಹಿಳೆಯರು ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನದ ಬಳೆಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಜ್ಯುವೆಲ್ಲರ್ಸ್ ಮಳಿಗೆಯಲ್ಲಿ ನಡೆದಿದೆ. 

ನ.23ರಂದು ಸಂಜೆ 6.15ರ ಸುಮಾರಿಗೆ ಉಡುಪಿ ವಿದ್ಯಾಸಮುದ್ರ ಮಾರ್ಗದಲ್ಲಿರುವ 

ಸುಲ್ತಾನ್‌ ಡೈಮಂಡ್‌ & ಗೋಲ್ಡ್‌ ಆಭರಣ  ಮಳಿಗೆಗೆ ಆಭರಣ ಖರೀದಿಸುವ ನೆಪದಲ್ಲಿ ಬುರ್ಖಾ ಧರಿಸಿದ ಮಹಿಳೆಯರಿಬ್ಬರು ಬಂದಿದ್ದು, ಅವರಿಗೆ ಮಳಿಗೆಯ ಮೊಹಮ್ಮದ್‌ ಮುಬಾರಕ್‌ ಚಿನ್ನದ ಬಳೆಗಳನ್ನು ತೋರಿಸಿದ್ದಾರೆ. ಆದರೆ ಆರೋಪಿ ಮಹಿಳೆಯರಿಬ್ಬರು ಮುಬಾರಕ್ ಅವರ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ ₹3 ಲಕ್ಷ ಮೌಲ್ಯದ 4 ಚಿನ್ನದ ಬಳೆಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಜ್ಯುವೆಲ್ಲರ್ಸ್ ಮಳಿಗೆಯ ಮ್ಯಾನೇಜರ್ ಮೊಹಮ್ಮದ್‌ ಅಜ್ಮಲ್‌ ನೀಡಿರುವ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು