10:24 PM Monday30 - March 2026
ಬ್ರೇಕಿಂಗ್ ನ್ಯೂಸ್
ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.… Kodagu | ಶನಿವಾರಸಂತೆ: ಟ್ರ್ಯಾಕ್ಟರ್ -ಕಾರು ಅಪಘಾತ; ಟ್ರ್ಯಾಕ್ಟರ್ ಚಾಲಕ ಸಾವು ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ… ಮಡಿಕೇರಿ: ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರಕಾರಿ ಶುಶ್ರೂಷಾ ಕಾಲೇಜು 2ನೇ ಘಟಿಕೋತ್ಸವ ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ…

ಇತ್ತೀಚಿನ ಸುದ್ದಿ

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ: ಡೆತ್  ನೋಟ್ ನಲ್ಲಿ ಅವರು ಬರೆದದ್ದೇನು? 

14/09/2021, 23:00

ಉಡುಪಿ(reporterkarnataka.com): ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಶಾ ಶೆಟ್ಟಿ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಅವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. 

ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ. 

ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಶವವನ್ನು ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೇನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಘಟನಾ ಸ್ಥಳಕ್ಕೆ ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಕಾರ್ಯದರ್ಶಿ ರಕ್ಷಿತಾ ಶೆಟ್ಟಿ, ಹಾಗೂ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಗ್ರಾಹಕ ಸಂಪರ್ಕ ಅಧಿಕಾರಿ ಹಫೀಜ್ ರೆಹಮಾನ್ ಆಗಮಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು